ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಪರ್ವತಕ್ಕೆ ಸೋಮವಾರ ಭೇಟಿ ನೀಡುವ ಮೊದಲು ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಂಜನಾದ್ರಿ ಕ್ಷೇತ್ರವು ಐತಿಹಾಸಿಕವಾಗಿ ಕಿಷ್ಕಿಂಧದಲ್ಲಿ ಇರುವುದರಿಂದ ಹನುಮ ಜನ್ಮಸ್ಥಳ ಅಂಜನಾದ್ರಿಯೇ ಆಗಿದೆ. ಈ ಕ್ಷೇತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ವಿವಾದ ಹಾಗೂ ಚರ್ಚೆಗೆ ಅವಕಾಶವೇ ಇಲ್ಲ. ನಮ್ಮ ನಂಬಿಕೆಯೇ ಘೋಷಣೆ. ಭಾರತದ ಜನ ಕೂಡ ಆಂಜನಾದ್ರಿ ಕ್ಷೇತ್ರವೇ ಆಂಜನೇಯನ ಜನ್ಮಸ್ಥಳ ಎಂದು ನಂಬಿಕೊಂಡಿದ್ದಾರೆ. ಇದೇ ಕಾರಣಕ್ಕೆ ನಿತ್ಯ ಸಾವಿರಾರು ಜನ ಪರ್ವತಕ್ಕೆ ಬರುತ್ತಿದ್ದಾರೆ ಎಂದರು.