<p><strong>ಕನಕಗಿರಿ: </strong>ಸಮೀಪದ ನವಲಿ ಗ್ರಾಮದ ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ₹1 ಕೋಟಿ ಸಾಲ ನೀಡುವಂತೆ ಸಂಘದ ಅಧ್ಯಕ್ಷ ಭೀಮನಗೌಡ ಹರ್ಲಾಪುರ ಅವರು ಒತ್ತಾಯಿಸಿದ್ದಾರೆ.</p>.<p>ರಾಯಚೂರು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಪಂಪನಗೌಡ ಬಾದರ್ಲಿ ಅವರನ್ನು ಭಾನುವಾರ ಭೇಟಿಯಾಗಿ ಈ ಮನವಿ ಸಲ್ಲಿಸಿದ್ದಾರೆ.</p>.<p>ಹಿಂಗಾರು ಬೆಳೆ ಬೆಳೆಯಲು ಹಾಗೂ ಹಳೆಯ ಸಾಲಗಾರರಿಗೆ ಹೆಚ್ಚುವರಿ ಸಾಲ ನೀಡಲು ಸಂಘಕ್ಕೆ ಸಾಲದ ಅವಶ್ಯಕತೆ ಇದೆ. ಕಳೆದ ಹತ್ತು ವರ್ಷಗಳಿಂದಲೂ ಒಬ್ಬ ರೈತರಿಗೆ ಬರೀ ₹30 ಸಾವಿರ ಕೃಷಿ ಸಾಲ ನೀಡಲಾಗಿದೆ. ಸ್ಕೇಲ್ ಆಫ್ ಫೈನಾನ್ಸ್ ಪ್ರಕಾರ ಹೆಚ್ಚುವರಿ ಸಾಲದ ಅವಶ್ಯಕತೆ ಇದೆ" ಎಂದು ಮನವಿಯಲ್ಲಿ ಗಮನ<br />ಸೆಳೆದಿದ್ದಾರೆ.</p>.<p>ಸಂಘದ ಉಪಾಧ್ಯಕ್ಷ ಚಂದ್ರಪ್ಪ ಹಿರೇಕುರುಬರ, ಜಡಿಯಪ್ಪ ಆದಾಪುರ, ನಿಂಗಪ್ಪ ನಾಯಕ, ಶಂಕರಗೌಡ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಾಗೇಶ ಗುಂಡದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ: </strong>ಸಮೀಪದ ನವಲಿ ಗ್ರಾಮದ ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ₹1 ಕೋಟಿ ಸಾಲ ನೀಡುವಂತೆ ಸಂಘದ ಅಧ್ಯಕ್ಷ ಭೀಮನಗೌಡ ಹರ್ಲಾಪುರ ಅವರು ಒತ್ತಾಯಿಸಿದ್ದಾರೆ.</p>.<p>ರಾಯಚೂರು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಪಂಪನಗೌಡ ಬಾದರ್ಲಿ ಅವರನ್ನು ಭಾನುವಾರ ಭೇಟಿಯಾಗಿ ಈ ಮನವಿ ಸಲ್ಲಿಸಿದ್ದಾರೆ.</p>.<p>ಹಿಂಗಾರು ಬೆಳೆ ಬೆಳೆಯಲು ಹಾಗೂ ಹಳೆಯ ಸಾಲಗಾರರಿಗೆ ಹೆಚ್ಚುವರಿ ಸಾಲ ನೀಡಲು ಸಂಘಕ್ಕೆ ಸಾಲದ ಅವಶ್ಯಕತೆ ಇದೆ. ಕಳೆದ ಹತ್ತು ವರ್ಷಗಳಿಂದಲೂ ಒಬ್ಬ ರೈತರಿಗೆ ಬರೀ ₹30 ಸಾವಿರ ಕೃಷಿ ಸಾಲ ನೀಡಲಾಗಿದೆ. ಸ್ಕೇಲ್ ಆಫ್ ಫೈನಾನ್ಸ್ ಪ್ರಕಾರ ಹೆಚ್ಚುವರಿ ಸಾಲದ ಅವಶ್ಯಕತೆ ಇದೆ" ಎಂದು ಮನವಿಯಲ್ಲಿ ಗಮನ<br />ಸೆಳೆದಿದ್ದಾರೆ.</p>.<p>ಸಂಘದ ಉಪಾಧ್ಯಕ್ಷ ಚಂದ್ರಪ್ಪ ಹಿರೇಕುರುಬರ, ಜಡಿಯಪ್ಪ ಆದಾಪುರ, ನಿಂಗಪ್ಪ ನಾಯಕ, ಶಂಕರಗೌಡ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಾಗೇಶ ಗುಂಡದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>