ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ವಿಳಂಬವಾಗಿರುವ ಪರೀಕ್ಷಾ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು. ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಿ 7 ತಿಂಗಳಾದರೂ ಫಲಿತಾಂಶ ಬಂದಿಲ್ಲ. ಸರಿಯಾಗಿ ಸ್ಕಾಲರ್ಷಿಪ್ ನೀಡಬೇಕು, ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾರಿಗೆ ಸೌಲಭ್ಯದ ಸಮಸ್ಯೆಗೆ ಪರಿಹಾರ ನೀಡಬೇಕು ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚಿಸಿರುವ ಶುಲ್ಕ ಕಡಿಮೆ ಮಾಡಬೇಕು’ ಎಂದು ಆಗ್ರಹಿಸಿದರು.