<p><strong>ಕೊಪ್ಪಳ</strong>: ‘ಬಿಜೆಪಿಯಲ್ಲಿ ಈಗ ತತ್ವ ಸಿದ್ದಾಂತಗಳು ಯಾವುದೂ ಉಳಿದುಕೊಂಡಿಲ್ಲ. ಅಲ್ಲಿ ಈಗ ವ್ಯಾಪಾರೀಕರಣ ಶುರುವಾಗಿದೆ’ ಎಂದು ಕಾಂಗ್ರೆಸ್ ನಾಯಕ ಲಕ್ಷ್ಮಣ ಸವದಿ ಹೇಳಿದರು.</p>.<p>ತಾಲ್ಲೂಕಿನ ವದಗನಾಳ ಗ್ರಾಮದಲ್ಲಿ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಪರ ಮತಯಾಚನೆ ಮಾಡಿದ ಅವರು, ‘ಬಿಜೆಪಿಯಲ್ಲಿದ್ದಾಗ ಪಕ್ಷ ವಿರೋಧಿ ಕೆಲಸ ಮಾಡಲಿಲ್ಲ. ಯಾರಿಗೂ ದ್ರೋಹ ಎಸಗಿಲ್ಲ. 20 ವರ್ಷಗಳ ಕಾಲ ಆ ಪಕ್ಷದಲ್ಲಿ ಶ್ರದ್ಧೆಯಿಂದ ಕೆಲಸ ಮಾಡಿದರೂ ಟಿಕೆಟ್ ಕೊಡದೇ ನನಗೆ ಅವಮಾನ ಮಾಡಿದರು’ ಎಂದರು.</p>.<p>‘ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ರಾಘವೇಂದ್ರ ಹಿಟ್ನಾಳ ಮತ್ತು ಬಸವರಾಜ ರಾಯರಡ್ಡಿ ಪ್ರಮುಖ ಪಾತ್ರ ವಹಿಸಿದ್ದಾರೆ. ಯಾವ ಪಕ್ಷದಲ್ಲಿ ಇರುತ್ತೇನೊ ಆ ಪಕ್ಷಕ್ಕೆ ನಿಷ್ಠನಾಗಿ ಇರುತ್ತೇನೆ. ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುವೆ. ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಸತ್ಯ. ಎಲ್ಲರೂ ಹಿಟ್ನಾಳ ಅವರಿಗೆ ಮತ ಹಾಕಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಬಿಜೆಪಿಯಲ್ಲಿ ಈಗ ತತ್ವ ಸಿದ್ದಾಂತಗಳು ಯಾವುದೂ ಉಳಿದುಕೊಂಡಿಲ್ಲ. ಅಲ್ಲಿ ಈಗ ವ್ಯಾಪಾರೀಕರಣ ಶುರುವಾಗಿದೆ’ ಎಂದು ಕಾಂಗ್ರೆಸ್ ನಾಯಕ ಲಕ್ಷ್ಮಣ ಸವದಿ ಹೇಳಿದರು.</p>.<p>ತಾಲ್ಲೂಕಿನ ವದಗನಾಳ ಗ್ರಾಮದಲ್ಲಿ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಪರ ಮತಯಾಚನೆ ಮಾಡಿದ ಅವರು, ‘ಬಿಜೆಪಿಯಲ್ಲಿದ್ದಾಗ ಪಕ್ಷ ವಿರೋಧಿ ಕೆಲಸ ಮಾಡಲಿಲ್ಲ. ಯಾರಿಗೂ ದ್ರೋಹ ಎಸಗಿಲ್ಲ. 20 ವರ್ಷಗಳ ಕಾಲ ಆ ಪಕ್ಷದಲ್ಲಿ ಶ್ರದ್ಧೆಯಿಂದ ಕೆಲಸ ಮಾಡಿದರೂ ಟಿಕೆಟ್ ಕೊಡದೇ ನನಗೆ ಅವಮಾನ ಮಾಡಿದರು’ ಎಂದರು.</p>.<p>‘ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ರಾಘವೇಂದ್ರ ಹಿಟ್ನಾಳ ಮತ್ತು ಬಸವರಾಜ ರಾಯರಡ್ಡಿ ಪ್ರಮುಖ ಪಾತ್ರ ವಹಿಸಿದ್ದಾರೆ. ಯಾವ ಪಕ್ಷದಲ್ಲಿ ಇರುತ್ತೇನೊ ಆ ಪಕ್ಷಕ್ಕೆ ನಿಷ್ಠನಾಗಿ ಇರುತ್ತೇನೆ. ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುವೆ. ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಸತ್ಯ. ಎಲ್ಲರೂ ಹಿಟ್ನಾಳ ಅವರಿಗೆ ಮತ ಹಾಕಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>