ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಪು ಘರ್ಷಣೆ ಬಳಿಕ ಊರು ತೊರೆದಿದ್ದ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Last Updated 8 ನವೆಂಬರ್ 2022, 5:32 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಮೂರು ತಿಂಗಳ ಹಿಂದೆ ನಡೆದಿದ್ದ ಗುಂಪು ಘರ್ಷಣೆಯ ಕಾರಣಕ್ಕಾಗಿ ಗ್ರಾಮ ತೊರೆದಿದ್ದನಾಗರಾಜ (25) ಎನ್ನುವ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.

ಘರ್ಷಣೆ ಬಳಿಕ‌ ನಾಗರಾಜ ಗಂಗಾವತಿಯ ಬಸವಣ್ಣ ವೃತ್ತದ ಬಳಿಯ ಸಂಬಂಧಿಕರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಈಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಗಂಗಾವತಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಹರಂ‌ ಹಬ್ಬದ ಮರು‌‌ದಿನ ಹುಲಿಹೈದರ ಗ್ರಾಮದಲ್ಲಿ ವಾಲ್ಮೀಕಿ ವೃತ್ತದ ವಿಚಾರವಾಗಿ ಎರಡು ಗುಂಪುಗಳ‌ ನಡುವೆ ಘರ್ಷಣೆಯಾಗಿ ಇಬ್ಬರು ಮೃತಪಟ್ಟಿದ್ದರು. 80ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದ್ದು,‌ ಆರೋಪಿಗಳನ್ನು ಬಳ್ಳಾರಿ ಹಾಗೂ ಧಾರವಾಡ ಜೈಲಿಗೆ ಕಳುಹಿಸಲಾಗಿದೆ.

ನಾಗರಾಜನ ಅಣ್ಣ ಗೋಸಲಪ್ಪ ಎನ್ನುವವರ ವಿರುದ್ಧವೂ ಘರ್ಷಣೆ ಪ್ರಕರಣದಲ್ಲಿ ದೂರು ದಾಖಲಾಗಿತ್ತು.

ಘರ್ಷಣೆಯಲ್ಲಿ ಭಾಗಿಯಾಗದೇ ಇದ್ದವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆಗ ಆರೋಪಿಸಿದ್ದರು. ಇದೇ ಕಾರಣಕ್ಕೆ ನಾಗರಾಜ್ ಸೇರಿದಂತೆ ಅನೇಕರು ಊರು ತೊರೆದಿದ್ದರು.

ನಾಗರಾಜ ಶವ ನೇಣು‌ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಹೌದು. ಕಾರಣ ಎನೆಂಬುದು ಗೊತ್ತಾಗಿಲ್ಲ. ಕುಟುಂಬದವರು ಬಂದ ಬಳಿಕ ವಿಚಾರಣೆ ಮಾಡುತ್ತೇವೆ. ಬಳಿಕ ದೂರು ದಾಖಲಿಸಿಕೊಳ್ಳುತ್ತೇವೆ ಎಂದು ಗಂಗಾವತಿ ನಗರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ವೆಂಕಟಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT