ಸಮುದಾಯ ಭಾಗವಹಿಸುವಿಕೆ, ಪೋಷಕರ ಸಹಕಾರ ಇಲ್ಲದೇ ಯಾವ ಯೋಜನೆ ಹಾಗೂ ಕಾರ್ಯಕ್ರಮ ಯಶಸ್ವಿಯಾಗುವದಿಲ್ಲ. ಅದರಂತೆ ಸ್ಥಳೀಯ ಸ್ವಾಮಿ ವಿವೆಕಾನಂದ ಯುವಕ ಬಳಗ , ಎಸ್ಡಿಎಂಸಿ ಮತ್ತು ಗ್ರಾಮಸ್ಥರು ಶಾಲೆ ಅಭಿವೃದ್ಧಿ, ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತಿರುವದು ಮಾದರಿಯಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ,ಶಿಕ್ಷಕರು ಸಹ ವಿವಿಧ ಚಟುವಟಿಕೆಗಳನ್ನು ಆಯೋಜನೆ ಮಾಡಿ, ಮಕ್ಕಳ ಭವಿಷ್ಯಕ್ಕೆ ಮುನ್ನುಡಿ ಬರೆದಿದ್ದಾರೆ ಎಂದರು.