<p><strong>ಭಾಲ್ಕಿ:</strong> ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಮಾಡಿದ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬ ಸದಸ್ಯರಿಗೆ ಶಾಸಕ ಈಶ್ವರ ಖಂಡ್ರೆ ಅವರು ಪರಿಹಾರ ಧನದ ಚೆಕ್ ವಿತರಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಆತ್ಮಹತ್ಯೆ ಪರಿಹಾರ ಯೋಜನೆಯಡಿ ಮಂಜೂರಾದ ಚೆಕ್ಗಳನ್ನು ಮೃತರ ನಾಲ್ವರು ಕುಟುಂಬ ಸದಸ್ಯರಿಗೆ ₹5 ಲಕ್ಷ ಮತ್ತು ಹಾವು ಕಡಿತದಿಂದ ಮೃತಪಟ್ಟ ಕುಟುಂಬಕ್ಕೆ ₹2 ಲಕ್ಷದ ಪರಿಹಾರದ ಚೆಕ್ಗಳನ್ನು ವಿತರಿಸಿದರು.</p>.<p>ಬಳಿಕ ಮಾತನಾಡಿದ ಅವರು,‘ಸಾಲಕ್ಕೆ ಹೆದರಿ ಜೀವನದಲ್ಲಿ ಜಿಗುಪ್ಸೆಗೊಂಡು ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಏನೇ ಸಂಕಷ್ಟ, ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತನ್ನಿ ನಾನೂ ಪರಿಹರಿಸುವ ಪ್ರಯತ್ನ ಮಾಡುತ್ತೇನೆ’ ಎಂದು ರೈತರಿಗೆ ಅಭಯ ನೀಡಿದರು.</p>.<p>ಸರ್ಕಾರ ಕೃಷಿಕರಿಗಾಗಿ ಸಾಕಷ್ಟು ಸೌಲಭ್ಯ ನೀಡುತ್ತಿದೆ. ಅವುಗಳ ಸದುಪಯೋಗ ಪಡೆದು ಕೊಳ್ಳಬೇಕು. ಕೃಷಿ ಮಾಡುವ ರೈತರು ಕೃಷಿ ಇಲಾಖೆ ಸೇರಿ, ಅನುಭವಿಗಳ ಮಾರ್ಗದರ್ಶನ, ಸಹಾಯ, ಸಹಕಾರ ಪಡೆದು ಉಳಿಮೆ ಮಾಡಿದರೇ ಸಾಲ, ಹಾನಿಯಾಗುವ ಸಾಧ್ಯತೆ ತೀರಾ ಕಡಿಮೆ ಇರುತ್ತದೆ. ಆ ಕಾರಣಕ್ಕಾಗಿ ರೈತರು ಇರುವ ಭೂಮಿಯಲ್ಲಿ ಬುದ್ಧಿವಂತಿಕೆಯಿಂದ ಕೃಷಿ ಮಾಡಬೇಕು ಎಂದರು.</p>.<p>ಸಾಲ ಮತ್ತು ಸ್ವಾಭಿಮಾನಕ್ಕೆ ಹೆದರಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಬೇಸರ ತರಿಸಿದೆ. ಇನ್ನಾದರೂ ಮುಂದೆ ಇಂಥ ಪ್ರಕರಣಗಳಿಗೆ ಕಡಿವಾಣ ಬೀಳಲಿ. ಮೃತ ರೈತರ ಕುಟುಂಬ ಸದಸ್ಯರು ವಾರಸುದಾರ ಇಲ್ಲದೇ ಜೀವನ ಹೇಗೆ ಚಿಂತೆ ಮಾಡಬಾರದು. ನಿಮ್ಮೊಂದಿಗೆ ನಾವಿದ್ದೇವೆ. ಸರ್ಕಾರದಿಂದ ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಮಂಜೂರು ಮಾಡಿಸಿ ಚೆಕ್ ವಿತರಿಸಿದ್ದೇನೆ. ಪರಿಹಾರದ ಧನವನ್ನು ಮಕ್ಕಳ ವಿದ್ಯಾಭ್ಯಾಸ, ಮದುವೆ ಸೇರಿ ಮತ್ತಿತರ ಒಳ್ಳೆಯ ಕಾರ್ಯಕ್ಕೆ ಬಳಸಿಕೊಳ್ಳುವಂತೆ ಸಲಹೆ ನೀಡಿದರು.</p>.<p>ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ರೂಪಾ ಎಂ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಮಾಡಿದ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬ ಸದಸ್ಯರಿಗೆ ಶಾಸಕ ಈಶ್ವರ ಖಂಡ್ರೆ ಅವರು ಪರಿಹಾರ ಧನದ ಚೆಕ್ ವಿತರಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಆತ್ಮಹತ್ಯೆ ಪರಿಹಾರ ಯೋಜನೆಯಡಿ ಮಂಜೂರಾದ ಚೆಕ್ಗಳನ್ನು ಮೃತರ ನಾಲ್ವರು ಕುಟುಂಬ ಸದಸ್ಯರಿಗೆ ₹5 ಲಕ್ಷ ಮತ್ತು ಹಾವು ಕಡಿತದಿಂದ ಮೃತಪಟ್ಟ ಕುಟುಂಬಕ್ಕೆ ₹2 ಲಕ್ಷದ ಪರಿಹಾರದ ಚೆಕ್ಗಳನ್ನು ವಿತರಿಸಿದರು.</p>.<p>ಬಳಿಕ ಮಾತನಾಡಿದ ಅವರು,‘ಸಾಲಕ್ಕೆ ಹೆದರಿ ಜೀವನದಲ್ಲಿ ಜಿಗುಪ್ಸೆಗೊಂಡು ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಏನೇ ಸಂಕಷ್ಟ, ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತನ್ನಿ ನಾನೂ ಪರಿಹರಿಸುವ ಪ್ರಯತ್ನ ಮಾಡುತ್ತೇನೆ’ ಎಂದು ರೈತರಿಗೆ ಅಭಯ ನೀಡಿದರು.</p>.<p>ಸರ್ಕಾರ ಕೃಷಿಕರಿಗಾಗಿ ಸಾಕಷ್ಟು ಸೌಲಭ್ಯ ನೀಡುತ್ತಿದೆ. ಅವುಗಳ ಸದುಪಯೋಗ ಪಡೆದು ಕೊಳ್ಳಬೇಕು. ಕೃಷಿ ಮಾಡುವ ರೈತರು ಕೃಷಿ ಇಲಾಖೆ ಸೇರಿ, ಅನುಭವಿಗಳ ಮಾರ್ಗದರ್ಶನ, ಸಹಾಯ, ಸಹಕಾರ ಪಡೆದು ಉಳಿಮೆ ಮಾಡಿದರೇ ಸಾಲ, ಹಾನಿಯಾಗುವ ಸಾಧ್ಯತೆ ತೀರಾ ಕಡಿಮೆ ಇರುತ್ತದೆ. ಆ ಕಾರಣಕ್ಕಾಗಿ ರೈತರು ಇರುವ ಭೂಮಿಯಲ್ಲಿ ಬುದ್ಧಿವಂತಿಕೆಯಿಂದ ಕೃಷಿ ಮಾಡಬೇಕು ಎಂದರು.</p>.<p>ಸಾಲ ಮತ್ತು ಸ್ವಾಭಿಮಾನಕ್ಕೆ ಹೆದರಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಬೇಸರ ತರಿಸಿದೆ. ಇನ್ನಾದರೂ ಮುಂದೆ ಇಂಥ ಪ್ರಕರಣಗಳಿಗೆ ಕಡಿವಾಣ ಬೀಳಲಿ. ಮೃತ ರೈತರ ಕುಟುಂಬ ಸದಸ್ಯರು ವಾರಸುದಾರ ಇಲ್ಲದೇ ಜೀವನ ಹೇಗೆ ಚಿಂತೆ ಮಾಡಬಾರದು. ನಿಮ್ಮೊಂದಿಗೆ ನಾವಿದ್ದೇವೆ. ಸರ್ಕಾರದಿಂದ ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಮಂಜೂರು ಮಾಡಿಸಿ ಚೆಕ್ ವಿತರಿಸಿದ್ದೇನೆ. ಪರಿಹಾರದ ಧನವನ್ನು ಮಕ್ಕಳ ವಿದ್ಯಾಭ್ಯಾಸ, ಮದುವೆ ಸೇರಿ ಮತ್ತಿತರ ಒಳ್ಳೆಯ ಕಾರ್ಯಕ್ಕೆ ಬಳಸಿಕೊಳ್ಳುವಂತೆ ಸಲಹೆ ನೀಡಿದರು.</p>.<p>ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ರೂಪಾ ಎಂ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>