ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ ಮತ್ತು ಎಚ್.ಆರ್. ಶ್ರೀನಾಥ್ ಮೂವರು ಆಕಾಂಕ್ಷಿಗಳು ಇರುವ ಕಾರಣ ಪೈಪೋಟಿ ಹೆಚ್ಚಿದೆ. ’ನಮ್ಮಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಕೊಡಲೇಬೇಕು’ ಎಂದು ಶ್ರೀನಾಥ್ ಹಾಗೂ ನಾಗಪ್ಪ ಇಬ್ಬರೂ ಪಟ್ಟು ಹಿಡಿದಿದ್ದಾರೆ. ಇವರಿಬ್ಬರ ಒಗ್ಗಟ್ಟಿನ ನಡುವೆಯೇ ಟಿಕೆಟ್ ಗಿಟ್ಟಿಸಲು ಅನ್ಸಾರಿ ಇನ್ನಿಲ್ಲದ ಕರಸತ್ತು ನಡೆಸಿದ್ದು, ಈಗಾಗಲೇ ಮೂವರೂ ಪ್ರಚಾರ ಆರಂಭಿಸಿದ್ದಾರೆ. ಹೀಗಾಗಿ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತದೆ ಎನ್ನುವ ಕುತೂಹಲವಿದೆ.