<p><strong>ಕುಷ್ಟಗಿ:</strong> ‘ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಉದಯಿಸಿದ ಕಾಂಗ್ರೆಸ್ ಪಕ್ಷ ದೇಶದ ಒಟ್ಟಾರೆ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದೆ’ ಎಂದು ತುಂಗಭದ್ರಾ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್ನ 140ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಹಾತ್ಮಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ನಂತರ ಅವರು ಮಾತನಾಡಿದರು.</p>.<p>‘ಬಡವರು, ದೀನ ದಲಿತರ ಸಬಲೀಕರಣಕ್ಕೆ ಶ್ರಮಿಸುತ್ತ ಬಂದಿದೆ. ಅಲ್ಲದೆ ರಸ್ತೆಗಳ ಅಭಿವೃದ್ಧಿ, ಉನ್ನತೀಕರಣ, ಕೃಷಿ ನೀರಾವರಿ ಮತ್ತು ವೈಜ್ಞಾನಿಕ ಕ್ಷೇತ್ರಗಳಿಗೆ ನೀಡಿದ ಮಹತ್ವವನ್ನು ದೇಶ ಗುರುತಿಸಿದೆ. ಭವಿಷ್ಯದಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ತನ್ನ ತತ್ವ ಮತ್ತು ಬದ್ಧತೆಯೊಂದಿಗೆ ಜನರ ಏಳಿಗೆಗೆ ಶ್ರಮಿಸಲಿದೆ’ ಎಂದರು.</p>.<p>ಮುಖಂಡ ಶೇಖರಗೌಡ ಮಾಲೀಪಾಟೀಲ, ದಿಶಾ ಸಮಿತಿ ಸದಸ್ಯ ದೊಡ್ಡಬಸನಗೌಡ ಬಯ್ಯಾಪುರ, ಪುರಸಭೆ ಮಾಜಿ ಸದಸ್ಯ ಮಾಜಿ ಸದಸ್ಯ ವಸಂತ ಮೇಲಿನಮನಿ, ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಲಾಡ್ಲೆಮಷಾಕ್ ಯಲಬುರ್ಗಿ, ಕೇದಾರನಾಥ ತುರಕಾಣಿ ಇತರರು ಮಾತನಾಡಿದರು.</p>.<p>ಸೋಮಶೇಖರ ವೈಜಾಪುರ, ಫಾರೂಕ್ ಡಲಾಯತ್, ಶಕುಂತಲಮ್ಮ ಹಿರೇಮಠ, ಶಾರದಾ ಕಟ್ಟಿಮನಿ, ಈರಣ್ಣ ಬದಾಮಿ, ಆಯೇಷಾಖಾನ್, ದುರಗೇಶ ಮಡಿವಾಳರ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು. ಇಮಾಮಸಾಬ್ ಗರಡಿಮನಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ‘ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಉದಯಿಸಿದ ಕಾಂಗ್ರೆಸ್ ಪಕ್ಷ ದೇಶದ ಒಟ್ಟಾರೆ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದೆ’ ಎಂದು ತುಂಗಭದ್ರಾ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್ನ 140ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಹಾತ್ಮಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ನಂತರ ಅವರು ಮಾತನಾಡಿದರು.</p>.<p>‘ಬಡವರು, ದೀನ ದಲಿತರ ಸಬಲೀಕರಣಕ್ಕೆ ಶ್ರಮಿಸುತ್ತ ಬಂದಿದೆ. ಅಲ್ಲದೆ ರಸ್ತೆಗಳ ಅಭಿವೃದ್ಧಿ, ಉನ್ನತೀಕರಣ, ಕೃಷಿ ನೀರಾವರಿ ಮತ್ತು ವೈಜ್ಞಾನಿಕ ಕ್ಷೇತ್ರಗಳಿಗೆ ನೀಡಿದ ಮಹತ್ವವನ್ನು ದೇಶ ಗುರುತಿಸಿದೆ. ಭವಿಷ್ಯದಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ತನ್ನ ತತ್ವ ಮತ್ತು ಬದ್ಧತೆಯೊಂದಿಗೆ ಜನರ ಏಳಿಗೆಗೆ ಶ್ರಮಿಸಲಿದೆ’ ಎಂದರು.</p>.<p>ಮುಖಂಡ ಶೇಖರಗೌಡ ಮಾಲೀಪಾಟೀಲ, ದಿಶಾ ಸಮಿತಿ ಸದಸ್ಯ ದೊಡ್ಡಬಸನಗೌಡ ಬಯ್ಯಾಪುರ, ಪುರಸಭೆ ಮಾಜಿ ಸದಸ್ಯ ಮಾಜಿ ಸದಸ್ಯ ವಸಂತ ಮೇಲಿನಮನಿ, ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಲಾಡ್ಲೆಮಷಾಕ್ ಯಲಬುರ್ಗಿ, ಕೇದಾರನಾಥ ತುರಕಾಣಿ ಇತರರು ಮಾತನಾಡಿದರು.</p>.<p>ಸೋಮಶೇಖರ ವೈಜಾಪುರ, ಫಾರೂಕ್ ಡಲಾಯತ್, ಶಕುಂತಲಮ್ಮ ಹಿರೇಮಠ, ಶಾರದಾ ಕಟ್ಟಿಮನಿ, ಈರಣ್ಣ ಬದಾಮಿ, ಆಯೇಷಾಖಾನ್, ದುರಗೇಶ ಮಡಿವಾಳರ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು. ಇಮಾಮಸಾಬ್ ಗರಡಿಮನಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>