ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕರಿಯಣ್ಣ ಸಂಗಟಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾದ ಬಗ್ಗೆ ಕೇಳಲಾದ ಪ್ರಶ್ನೆಗೆ ’ಯಾಕೆ ಭೇಟಿಯಾಗಿದ್ದಾರೆ ಎನ್ನುವುದನ್ನು ಗೊತ್ತಿಲ್ಲ. ಕಾಂಗ್ರೆಸ್ ರೈಲು ಇದ್ದ ಹಾಗೆ. ಹತ್ತುವವರು ಹತ್ತುತ್ತಾರೆ, ಇಳಿಯುವವರು ಇಳಿದು ಹೋಗುತ್ತಾರೆ. ಹಿಂದಿನ ಎರಡು ಅವಧಿಯಲ್ಲಿ ಶಾಸಕನಾಗಿ ಕ್ಷೇತ್ರಕ್ಕೆ ₹4,500 ಕೋಟಿ ಅನುದಾನ ತಂದು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಜನ ಈ ಬಾರಿಯೂ ಆಶೀರ್ವಾದ ಮಾಡುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.