ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪರಿಶಿಷ್ಟರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,‘ಸಾಮಾಜಿಕ ಕಳಕಳಿ ಎಲ್ಲಿಯವರೆಗೆ ಬರುವುದಿಲ್ಲವೊ ಅಲ್ಲಿಯವರೆಗೂ ಇಂಥ ಘಟನೆಗಳು ನಡೆಯುತ್ತವೆ. ಆದರೂ ಸರ್ಕಾರ ಕೈಕಟ್ಟಿ ಕೂತಿಲ್ಲ. ವಿಶೇಷ ಕಾನೂನು ಮತ್ತು ನ್ಯಾಯಾಲಯಗಳ ಮೂಲಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ನೊಂದವರಿಗೆ ಪರಿಹಾರ ನೀಡಲಾಗುತ್ತದೆ. ಕೆಲ ಪ್ರಕರಣಗಳಲ್ಲಿ ತನಿಖೆ ವಿಳಂಬವಾಗಿರಬಹುದು ಅಷ್ಟೇ’ ಎಂದರು.