ಕೊಪ್ಪಳ ತಾಲ್ಲೂಕಿನ ವನಬಳ್ಳಾರಿ ಗ್ರಾಮದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು 'ಬಿಜೆಪಿ ಮತದಾರರನ್ನು ವಂಚಿಸುವ ಕೆಲಸ ಮಾಡುತ್ತಿದೆ. ಇದೆಲ್ಲ ಆ ಪಕ್ಷದ ಚುನಾವಣಾ ತಂತ್ರದ ಭಾಗವಾಗಿದೆ. ಪರಿಶಿಷ್ಟ ಹಾಗೂ ಮುಸ್ಲಿಂ ಸಮುದಾಯ ಸೇರಿದಂತೆ ಇನ್ನಿತರ ಅಹಿಂದ ವರ್ಗವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಈ ಕೆಲಸ ಮಾಡುತ್ತಿದೆ. ಬಿಜೆಪಿಗೆ ಈಗಲೇ ಸೋಲಿನ ಭಯ ಶುರುವಾಗಿದ್ದು, ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಹೆಸರು ಕೈ ಬಿಡಲಾಗಿದೆ ಎಂದು ಆರೋಪಿಸಿದರು.