ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಅವರು ‘ಸಿದ್ದರಾಮಯ್ಯ ಅವರ ಜನ್ಮದಿನದ ಅಮೃತ ಮಹೋತ್ಸವ ಮತ್ತು ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮಕ್ಕೆ ವ್ಯಕ್ತವಾದ ಜನಬೆಂಬಲ ಕಂಡು ಬಿಜೆಪಿ ದಿಕ್ಕೆಟ್ಟು ಹೋಗಿದೆ. ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖಾತ್ರಿಯಾಗಿದೆ. ಭ್ರಮನಿರಸನಗೊಂಡು ಬಿಜೆಪಿ ಇಂಥ ಕೆಲಸಗಳನ್ನು ಮಾಡುತ್ತಿದೆ’ ಎಂದು ಟೀಕಿಸಿದರು.