<p class="Subhead">ಕೊಪ್ಪಳ: ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ನನ್ನು ಕೊಂದ ರೀತಿಯಲ್ಲಿಯೇ ಕೊಲ್ಲಬೇಕು ಎಂದು ಉನ್ನತ ಶಿಕ್ಷಣ ಸಚಿವ ಸಿ.ಎಸ್. ಅಶ್ವತ್ಥನಾರಾಯಣ ಹೇಳಿಕೆ ಖಂಡಿಸಿ ನಗರದಲ್ಲಿ ಶುಕ್ರವಾರ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.</p>.<p>ಇಲ್ಲಿನ ಕುವೆಂಪು ನಗರದ ಗುತ್ತಿಗೆದಾರ ಮಲ್ಲಿಕಾರ್ಜುನ ಪೂಜಾರ ಅವರ ಹೆಸರಿನಲ್ಲಿ ಈ ಕುರಿತು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.</p>.<p>ಅಶ್ವತ್ಥನಾರಾಯಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಭ್ರಷ್ಟ, ಕೋಮುವಾದಿ ಹಾಗೂ ಜನವಿರೋಧಿ ಸರ್ಕಾರ, ಇದು ಈ ಸಲದ ಚುನಾವಣೆಯಲ್ಲಿ ತೊಲಗಬೇಕು ಎಂದು ಆಗ್ರಹಿಸಿದರು. ಅಶ್ವತ್ಥನಾರಾಯಣ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.</p>.<p>ಪಕ್ಷದ ಪ್ರಮುಖರಾದ ಕೃಷ್ಣಾರಡ್ಡಿ ಗಲಬಿ, ಗಾಳೆಪ್ಪ ಪೂಜಾರ, ಕಾಟನ್ ಪಾಶಾ, ಕಿಶೋರಿ ಬೂದನೂರ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಗೊಂಡಬಾಳ, ಸುಮಂಗಲಾ ಕಂಬಳಿ, ರೂಪಾ ನಾಗರಾಳ, ಪರಶುರಾಮ್ ಕೆರಳ್ಳಿ, ಸಲೀಮ್ ಅಳವಂಡಿ, ಅಜೀಮ್ ಅತ್ತಾರ್ ಸೇರಿ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Subhead">ಕೊಪ್ಪಳ: ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ನನ್ನು ಕೊಂದ ರೀತಿಯಲ್ಲಿಯೇ ಕೊಲ್ಲಬೇಕು ಎಂದು ಉನ್ನತ ಶಿಕ್ಷಣ ಸಚಿವ ಸಿ.ಎಸ್. ಅಶ್ವತ್ಥನಾರಾಯಣ ಹೇಳಿಕೆ ಖಂಡಿಸಿ ನಗರದಲ್ಲಿ ಶುಕ್ರವಾರ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.</p>.<p>ಇಲ್ಲಿನ ಕುವೆಂಪು ನಗರದ ಗುತ್ತಿಗೆದಾರ ಮಲ್ಲಿಕಾರ್ಜುನ ಪೂಜಾರ ಅವರ ಹೆಸರಿನಲ್ಲಿ ಈ ಕುರಿತು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.</p>.<p>ಅಶ್ವತ್ಥನಾರಾಯಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಭ್ರಷ್ಟ, ಕೋಮುವಾದಿ ಹಾಗೂ ಜನವಿರೋಧಿ ಸರ್ಕಾರ, ಇದು ಈ ಸಲದ ಚುನಾವಣೆಯಲ್ಲಿ ತೊಲಗಬೇಕು ಎಂದು ಆಗ್ರಹಿಸಿದರು. ಅಶ್ವತ್ಥನಾರಾಯಣ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.</p>.<p>ಪಕ್ಷದ ಪ್ರಮುಖರಾದ ಕೃಷ್ಣಾರಡ್ಡಿ ಗಲಬಿ, ಗಾಳೆಪ್ಪ ಪೂಜಾರ, ಕಾಟನ್ ಪಾಶಾ, ಕಿಶೋರಿ ಬೂದನೂರ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಗೊಂಡಬಾಳ, ಸುಮಂಗಲಾ ಕಂಬಳಿ, ರೂಪಾ ನಾಗರಾಳ, ಪರಶುರಾಮ್ ಕೆರಳ್ಳಿ, ಸಲೀಮ್ ಅಳವಂಡಿ, ಅಜೀಮ್ ಅತ್ತಾರ್ ಸೇರಿ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>