<p><strong>ಯಲಬುರ್ಗಾ:</strong> ‘ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಆರ್ಥಿಕ ಹೊರೆಯಾಗಿದೆ. ಇದಕ್ಕೆ ಕಾರಣವಾಗಿರುವ ಕೇಂದ್ರ ಸರ್ಕಾರದ ಧೋರಣೆ ಜನ ವಿರೋಧಿಯಾಗಿದೆ’ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಕಂದಕೂರು ಆರೋಪಿಸಿದರು.</p>.<p>ಪಟ್ಟಣದ ಕುದ್ರಿಕೊಟಗಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಅಡುಗೆ ಅನಿಲದ ದರವೂ ಹೆಚ್ಚಾಗಿದೆ. ಜನ ಸಾಮಾನ್ಯರಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ. ಕೋವಿಡ್ ಪರಿಸ್ಥಿತಿಯಲ್ಲಿ ದರ ಕಡಿಮೆ ಮಾಡುವುದನ್ನು ಬಿಟ್ಟು ಹೆಚ್ಚಿಸುತ್ತಿರುವುದು ಜನರಿಗೆ ಮಾಡುತ್ತಿರುವ ದ್ರೋಹ ಎಂದು ಟೀಕಿಸಿದರು.</p>.<p>ಜಿ.ಪಂ. ಸದಸ್ಯರಾದ ಗಿರಿಜಾ ಸಂಗಟಿ, ಹೊಳೆಯಮ್ಮ ಪೋಲಿಸ್ ಪಾಟೀಲ, ತಾ.ಪಂ. ಸದಸ್ಯೆ ಸಾವಿತ್ರಿ ಗೊಲ್ಲರ, ಪ.ಪಂ. ಸದಸ್ಯೆ ಡಾ.ನಂದಿತಾ ದಾನರೆಡ್ಡಿ, ಮಾಜಿ ಸದಸ್ಯರಾದ ಶರಣಮ್ಮ ಪೂಜಾರ ಹಾಗೂ ಮಹಿಳಾ ಘಟಕದ ಸದಸ್ಯೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ‘ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಆರ್ಥಿಕ ಹೊರೆಯಾಗಿದೆ. ಇದಕ್ಕೆ ಕಾರಣವಾಗಿರುವ ಕೇಂದ್ರ ಸರ್ಕಾರದ ಧೋರಣೆ ಜನ ವಿರೋಧಿಯಾಗಿದೆ’ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಕಂದಕೂರು ಆರೋಪಿಸಿದರು.</p>.<p>ಪಟ್ಟಣದ ಕುದ್ರಿಕೊಟಗಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಅಡುಗೆ ಅನಿಲದ ದರವೂ ಹೆಚ್ಚಾಗಿದೆ. ಜನ ಸಾಮಾನ್ಯರಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ. ಕೋವಿಡ್ ಪರಿಸ್ಥಿತಿಯಲ್ಲಿ ದರ ಕಡಿಮೆ ಮಾಡುವುದನ್ನು ಬಿಟ್ಟು ಹೆಚ್ಚಿಸುತ್ತಿರುವುದು ಜನರಿಗೆ ಮಾಡುತ್ತಿರುವ ದ್ರೋಹ ಎಂದು ಟೀಕಿಸಿದರು.</p>.<p>ಜಿ.ಪಂ. ಸದಸ್ಯರಾದ ಗಿರಿಜಾ ಸಂಗಟಿ, ಹೊಳೆಯಮ್ಮ ಪೋಲಿಸ್ ಪಾಟೀಲ, ತಾ.ಪಂ. ಸದಸ್ಯೆ ಸಾವಿತ್ರಿ ಗೊಲ್ಲರ, ಪ.ಪಂ. ಸದಸ್ಯೆ ಡಾ.ನಂದಿತಾ ದಾನರೆಡ್ಡಿ, ಮಾಜಿ ಸದಸ್ಯರಾದ ಶರಣಮ್ಮ ಪೂಜಾರ ಹಾಗೂ ಮಹಿಳಾ ಘಟಕದ ಸದಸ್ಯೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>