<p><strong>ಕನಕಗಿರಿ:</strong> ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ವಿದ್ಯುತ್ ದರ ಏರಿಕೆ ವಿರೋಧಿಸಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಹುಲಿಹೈದರ, ನವಲಿ ಗ್ರಾಮಗಳ ಪೆಟ್ರೋಲ್ ಬಂಕ್ ಎದುರು ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.</p>.<p>ಹುಲಿಹೈದರದಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ ಮಾತನಾಡಿ,‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರು, ಕಾರ್ಮಿಕ ವಿರೋಧಿ ಸರ್ಕಾರವಾಗಿದೆ’ ಎಂದು ಟೀಕಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಹೊಸ್ಗೇರ (ಹಿರೇಖೇಡ) , ಸಾವಿತ್ರಿ ಲಕ್ಷ್ಮಣ ( ಗೌರಿಪುರ), ಸದಸ್ಯರಾದ ರಾಜಸಾಬ, ಬೇಗ್ಂ ಶಾಮೀದಸಾಬ ಕನಕಗಿರಿ, ರೇಣಮ್ಮ ಹರಿಜನ, ಪ್ರಮುಖರಾದ ಗೋಸ್ಲೆಪ್ಪ ಗದ್ದಿ, ಈಶಪ್ಪ ಹೊಸ್ಗೇರ, ಬೆಟ್ಟಪ್ಪ ಜೀರಾಳ, ಹನುಮಂತಪ್ಪ ಜಾಡಿ, ನಾಗಪ್ಪ ಬಸರಿಹಾಳ ಹಾಗೂ ಶೇಖರಗೌಡ ಪಾಟೀಲ ಇತರರು ಇದ್ದರು.</p>.<p>ಸಮೀಪದ ನವಲಿ ಗ್ರಾಮದ ಪೆಟ್ರೋಲ್ ಬಂಕ್ ಮುಂದೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಡಿಯಪ್ಪ ಮುಕ್ಕುಂದಿ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಪೃಥ್ವಿರಾಜ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.</p>.<p>ಪ್ರಗತಿಪರ ಚಿಂತಕ ಲಿಂಗರಾಜ ಹೂಗಾರ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಿಂದ ಟೀಕಿಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಪ್ರಜ್ವಲರಾಮ್, ಜಡಿಯಪ್ಪ ಭೋವಿ ಸೇರಿದಂತೆ ವಿವಿಧ ಗ್ರಾಮಸ್ಥರು ಭಾಗವಹಿಸಿದ್ದರು.</p>.<p>ಚಿಕ್ಕಮಾದಿನಾಳ ಹೋಬಳಿ ವ್ಯಾಪ್ತಿಯ ಕಾರ್ಯಕರ್ತರು ಕೊಪ್ಪಳ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು.</p>.<p>ಹಾಲುಮತ ಸಮಾಜದ ಹಿರಿಯ ಮುಖಂಡ ಸಿದ್ದಪ್ಪ ನೀರ್ಲೂಟಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಸಂತಗೌಡ ಪಾಟೀಲ ಮಾತನಾಡಿ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿದರು.</p>.<p>ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ:</strong> ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ವಿದ್ಯುತ್ ದರ ಏರಿಕೆ ವಿರೋಧಿಸಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಹುಲಿಹೈದರ, ನವಲಿ ಗ್ರಾಮಗಳ ಪೆಟ್ರೋಲ್ ಬಂಕ್ ಎದುರು ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.</p>.<p>ಹುಲಿಹೈದರದಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ ಮಾತನಾಡಿ,‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರು, ಕಾರ್ಮಿಕ ವಿರೋಧಿ ಸರ್ಕಾರವಾಗಿದೆ’ ಎಂದು ಟೀಕಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಹೊಸ್ಗೇರ (ಹಿರೇಖೇಡ) , ಸಾವಿತ್ರಿ ಲಕ್ಷ್ಮಣ ( ಗೌರಿಪುರ), ಸದಸ್ಯರಾದ ರಾಜಸಾಬ, ಬೇಗ್ಂ ಶಾಮೀದಸಾಬ ಕನಕಗಿರಿ, ರೇಣಮ್ಮ ಹರಿಜನ, ಪ್ರಮುಖರಾದ ಗೋಸ್ಲೆಪ್ಪ ಗದ್ದಿ, ಈಶಪ್ಪ ಹೊಸ್ಗೇರ, ಬೆಟ್ಟಪ್ಪ ಜೀರಾಳ, ಹನುಮಂತಪ್ಪ ಜಾಡಿ, ನಾಗಪ್ಪ ಬಸರಿಹಾಳ ಹಾಗೂ ಶೇಖರಗೌಡ ಪಾಟೀಲ ಇತರರು ಇದ್ದರು.</p>.<p>ಸಮೀಪದ ನವಲಿ ಗ್ರಾಮದ ಪೆಟ್ರೋಲ್ ಬಂಕ್ ಮುಂದೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಡಿಯಪ್ಪ ಮುಕ್ಕುಂದಿ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಪೃಥ್ವಿರಾಜ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.</p>.<p>ಪ್ರಗತಿಪರ ಚಿಂತಕ ಲಿಂಗರಾಜ ಹೂಗಾರ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಿಂದ ಟೀಕಿಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಪ್ರಜ್ವಲರಾಮ್, ಜಡಿಯಪ್ಪ ಭೋವಿ ಸೇರಿದಂತೆ ವಿವಿಧ ಗ್ರಾಮಸ್ಥರು ಭಾಗವಹಿಸಿದ್ದರು.</p>.<p>ಚಿಕ್ಕಮಾದಿನಾಳ ಹೋಬಳಿ ವ್ಯಾಪ್ತಿಯ ಕಾರ್ಯಕರ್ತರು ಕೊಪ್ಪಳ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು.</p>.<p>ಹಾಲುಮತ ಸಮಾಜದ ಹಿರಿಯ ಮುಖಂಡ ಸಿದ್ದಪ್ಪ ನೀರ್ಲೂಟಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಸಂತಗೌಡ ಪಾಟೀಲ ಮಾತನಾಡಿ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿದರು.</p>.<p>ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>