<p><strong>ಹೊಸ ಬಂಡಿಹರ್ಲಾಪುರ (ಮುನಿರಾಬಾದ್): </strong>‘ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ’ ಎಂದು ಮುನಿರಾಬಾದ್ ಪೊಲೀಸ್ ಠಾಣಾಧಿಕಾರಿ ಸುಪ್ರೀತ್ ಪಾಟೀಲ ಅಭಿಪ್ರಾಯಪಟ್ಟರು.</p>.<p>ಸಮೀಪದ ಹೊಸ ಬಂಡಿಹರ್ಲಾಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ‘ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು’ ಉಚಿತ ಆನ್ಲೈನ್ ಕಾರ್ಯಾಗಾರದ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>‘ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳ ಸಂಖ್ಯೆ ಏರುಗತಿಯಲ್ಲಿರುವುದು ಆಶಾದಾಯಕ ಬೆಳವಣಿಗೆ. ಪರೀಕ್ಷೆ ತಯಾರಿಗೆ ಉತ್ತಮ ತರಬೇತಿ, ಸಂಪನ್ಮೂಲ, ಒಳ್ಳೆಯ ಪುಸ್ತಕಗಳು ದೊರೆಯುತ್ತಿವೆ. ಲಭ್ಯವಿರುವ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಯಶಸ್ವಿಯಾಗಿ’ ಎಂದು ಅವರು ವಿದ್ಯಾರ್ಥಿಗಳಿಗೆ<br />ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ನಿಂಗಪ್ಪ ಕಂಬಳಿ ಮಾತನಾಡಿ,‘ಮಾನಸಿಕ ದ್ವಂದ್ವಗಳನ್ನು ನಿವಾರಿಸಿಕೊಂಡು ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು. ಪರೀಕ್ಷೆಗೆ ಅಗತ್ಯವಿರುವ ಸಂಪನ್ಮೂಲ ಸಂಗ್ರಹ, ಪರಿಣಿತರ ಮಾರ್ಗದರ್ಶನ ಪಡೆದು ಯಶಸ್ಸಿಗೆ ಪೂರಕವಾಗಬಲ್ಲ ಎಲ್ಲ ಅವಕಾಶಗಳನ್ನು ಸದುಪಯೋಗಪಡಿಸಿ<br />ಕೊಳ್ಳಬೇಕು. ಪರಿಶ್ರಮ ಪಟ್ಟು ಓದುವವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ’ ಎಂದರು.</p>.<p>ಐದು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ವೀರೇಶ ಬಡಿಗೇರ್-ಇತಿಹಾಸ, ಶಂಕರ ಬಿರಾದಾರ-ಭೂಗೋಳಶಾಸ್ತ್ರ, ಡಾ. ಪಾಂಡುರಂಗ-ಅರ್ಥಶಾಸ್ತ್ರ, ಈಶ್ವರ ಗಿರಿ-ಮಾನಸಿಕ ಸಾಮರ್ಥ್ಯ, ಶರಣು ಬಾಗೂರು-ರಾಜ್ಯಶಾಸ್ತ್ರ, ವೆಂಕಟೇಶ-ಸಾಮಾನ್ಯ ವಿಜ್ಞಾನ ವಿಷಯಗಳ ಮೇಲೆ ಉಪನ್ಯಾಸ ನೀಡಿದರು.</p>.<p>ರಾಜು, ಅನುರಾಧ, ವೆಂಕೋಬ ಮತ್ತು ತಾಯಪ್ಪ ಅನುಭವ ಹಂಚಿಕೊಂಡರು. ಸಹಾಯಕ ಪ್ರಾಧ್ಯಾಪಕರಾದ ಸಂತೋಷ ಕಾಡಪ್ಪನವರ, ವೀರೇಂದ್ರ ಪಾಟೀಲ, ರಾಮಣ್ಣ ಉಪ್ಪಾರ ಈ ವೇಳೆ ಹಾಜರಿದ್ದರು.</p>.<p>ಜಗದೀಶ ಹೊಸಹಳ್ಳಿ ಸ್ವಾಗತಿಸಿದರು ಹಾಗೂ ಅನ್ನಪೂರ್ಣ ಪಂತರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸ ಬಂಡಿಹರ್ಲಾಪುರ (ಮುನಿರಾಬಾದ್): </strong>‘ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ’ ಎಂದು ಮುನಿರಾಬಾದ್ ಪೊಲೀಸ್ ಠಾಣಾಧಿಕಾರಿ ಸುಪ್ರೀತ್ ಪಾಟೀಲ ಅಭಿಪ್ರಾಯಪಟ್ಟರು.</p>.<p>ಸಮೀಪದ ಹೊಸ ಬಂಡಿಹರ್ಲಾಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ‘ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು’ ಉಚಿತ ಆನ್ಲೈನ್ ಕಾರ್ಯಾಗಾರದ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>‘ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳ ಸಂಖ್ಯೆ ಏರುಗತಿಯಲ್ಲಿರುವುದು ಆಶಾದಾಯಕ ಬೆಳವಣಿಗೆ. ಪರೀಕ್ಷೆ ತಯಾರಿಗೆ ಉತ್ತಮ ತರಬೇತಿ, ಸಂಪನ್ಮೂಲ, ಒಳ್ಳೆಯ ಪುಸ್ತಕಗಳು ದೊರೆಯುತ್ತಿವೆ. ಲಭ್ಯವಿರುವ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಯಶಸ್ವಿಯಾಗಿ’ ಎಂದು ಅವರು ವಿದ್ಯಾರ್ಥಿಗಳಿಗೆ<br />ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ನಿಂಗಪ್ಪ ಕಂಬಳಿ ಮಾತನಾಡಿ,‘ಮಾನಸಿಕ ದ್ವಂದ್ವಗಳನ್ನು ನಿವಾರಿಸಿಕೊಂಡು ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು. ಪರೀಕ್ಷೆಗೆ ಅಗತ್ಯವಿರುವ ಸಂಪನ್ಮೂಲ ಸಂಗ್ರಹ, ಪರಿಣಿತರ ಮಾರ್ಗದರ್ಶನ ಪಡೆದು ಯಶಸ್ಸಿಗೆ ಪೂರಕವಾಗಬಲ್ಲ ಎಲ್ಲ ಅವಕಾಶಗಳನ್ನು ಸದುಪಯೋಗಪಡಿಸಿ<br />ಕೊಳ್ಳಬೇಕು. ಪರಿಶ್ರಮ ಪಟ್ಟು ಓದುವವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ’ ಎಂದರು.</p>.<p>ಐದು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ವೀರೇಶ ಬಡಿಗೇರ್-ಇತಿಹಾಸ, ಶಂಕರ ಬಿರಾದಾರ-ಭೂಗೋಳಶಾಸ್ತ್ರ, ಡಾ. ಪಾಂಡುರಂಗ-ಅರ್ಥಶಾಸ್ತ್ರ, ಈಶ್ವರ ಗಿರಿ-ಮಾನಸಿಕ ಸಾಮರ್ಥ್ಯ, ಶರಣು ಬಾಗೂರು-ರಾಜ್ಯಶಾಸ್ತ್ರ, ವೆಂಕಟೇಶ-ಸಾಮಾನ್ಯ ವಿಜ್ಞಾನ ವಿಷಯಗಳ ಮೇಲೆ ಉಪನ್ಯಾಸ ನೀಡಿದರು.</p>.<p>ರಾಜು, ಅನುರಾಧ, ವೆಂಕೋಬ ಮತ್ತು ತಾಯಪ್ಪ ಅನುಭವ ಹಂಚಿಕೊಂಡರು. ಸಹಾಯಕ ಪ್ರಾಧ್ಯಾಪಕರಾದ ಸಂತೋಷ ಕಾಡಪ್ಪನವರ, ವೀರೇಂದ್ರ ಪಾಟೀಲ, ರಾಮಣ್ಣ ಉಪ್ಪಾರ ಈ ವೇಳೆ ಹಾಜರಿದ್ದರು.</p>.<p>ಜಗದೀಶ ಹೊಸಹಳ್ಳಿ ಸ್ವಾಗತಿಸಿದರು ಹಾಗೂ ಅನ್ನಪೂರ್ಣ ಪಂತರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>