<p><strong>ಕನಕಗಿರಿ: </strong>‘ಪಟ್ಟಣದ ಅಭಿವೃದ್ಧಿ ವಿಷಯದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಪಾತ್ರ ಹಿರಿದು’ ಎಂದು ಪ್ರೊಬೇಷನರಿ ಉಪವಿಭಾಗಾಧಿಕಾರಿ ರಜನೀಕಾಂತ ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿಯಾಗಿ ತಹಶೀಲ್ದಾರ್ ರವಿ ಅಂಗಡಿ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಭಿವೃದ್ಧಿ ವಿಷಯದಲ್ಲಿ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಇರಬಾರದು. ಹೊಂದಾಣಿಕೆಯಿಂದ ಅಭಿವೃದ್ಧಿ ಮಾಡಬೇಕು ಎಂದರು.</p>.<p>ಸರ್ಕಾರದಿಂದ ಬಂದಿರುವ ಪ್ರತಿಯೊಂದು ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ದೊರಕಿಸಿ ಆರ್ಥಿಕವಾಗಿ ಸ್ವಾಲಂಬಿಗಳನ್ನಾಗಿಸಬೇಕು. ಇದರಿಂದ ದೇಶ ಅಭಿವೃದ್ಧಿಯಾಗುತ್ತದೆ ಎಂದು ಅವರು ತಿಳಿಸಿದರು.</p>.<p>ಲಾಕ್ಡೌನ್ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.</p>.<p>ತಹಶೀಲ್ದಾರ್ ರವಿ ಅಂಗಡಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ರವೀಂದ್ರ ಸಜ್ಜನ್, ಉಪಾಧ್ಯಕ್ಷೆ ಸರಸ್ವತಿ ಸಣ್ಣ ಕನಕಪ್ಪ, ಸದಸ್ಯರಾದ ಶರಣಬಸಪ್ಪ ಭತ್ತದ, ಮಂಜುನಾಥ ಗಡಾದ, ರವಿ ಭಜಂತ್ರಿ, ಮುಖ್ಯಾಧಿಕಾರಿ ತಿರುಮಲಮ್ಮ ಹಾಗೂ ಸಹಕಾರ ಬ್ಯಾಂಕ್ ಅಧ್ಯಕ್ಷ ಪುರುಷೋತ್ತಮ್ಮರಡ್ಡಿ ಮಾದಿನಾಳ ಮಾತನಾಡಿದರು.</p>.<p>ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ಹುಲಗಪ್ಪ ವಾಲೇಕಾರ, ಪಾಷಾ ಮುಲ್ಲಾರ, ಖಾಜಸಾಬ ಗುರಿಕಾರ, ಸುಭಾಸ ಕಂದಕೂರು, ಆಫೀಜ ಬೇಗ್ಂ, ಶಾಂತಮ್ಮ ಚೌಡ್ಕಿ, ಹುಸೇನಸಾಬ, ಭಾಗ್ಯಲಕ್ಷ್ಮೀ ಕನಕದಾಸ ಪೂಜಾರ ಹಾಗೂ ಕೀರ್ತಿ ಸೋನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ: </strong>‘ಪಟ್ಟಣದ ಅಭಿವೃದ್ಧಿ ವಿಷಯದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಪಾತ್ರ ಹಿರಿದು’ ಎಂದು ಪ್ರೊಬೇಷನರಿ ಉಪವಿಭಾಗಾಧಿಕಾರಿ ರಜನೀಕಾಂತ ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿಯಾಗಿ ತಹಶೀಲ್ದಾರ್ ರವಿ ಅಂಗಡಿ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಭಿವೃದ್ಧಿ ವಿಷಯದಲ್ಲಿ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಇರಬಾರದು. ಹೊಂದಾಣಿಕೆಯಿಂದ ಅಭಿವೃದ್ಧಿ ಮಾಡಬೇಕು ಎಂದರು.</p>.<p>ಸರ್ಕಾರದಿಂದ ಬಂದಿರುವ ಪ್ರತಿಯೊಂದು ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ದೊರಕಿಸಿ ಆರ್ಥಿಕವಾಗಿ ಸ್ವಾಲಂಬಿಗಳನ್ನಾಗಿಸಬೇಕು. ಇದರಿಂದ ದೇಶ ಅಭಿವೃದ್ಧಿಯಾಗುತ್ತದೆ ಎಂದು ಅವರು ತಿಳಿಸಿದರು.</p>.<p>ಲಾಕ್ಡೌನ್ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.</p>.<p>ತಹಶೀಲ್ದಾರ್ ರವಿ ಅಂಗಡಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ರವೀಂದ್ರ ಸಜ್ಜನ್, ಉಪಾಧ್ಯಕ್ಷೆ ಸರಸ್ವತಿ ಸಣ್ಣ ಕನಕಪ್ಪ, ಸದಸ್ಯರಾದ ಶರಣಬಸಪ್ಪ ಭತ್ತದ, ಮಂಜುನಾಥ ಗಡಾದ, ರವಿ ಭಜಂತ್ರಿ, ಮುಖ್ಯಾಧಿಕಾರಿ ತಿರುಮಲಮ್ಮ ಹಾಗೂ ಸಹಕಾರ ಬ್ಯಾಂಕ್ ಅಧ್ಯಕ್ಷ ಪುರುಷೋತ್ತಮ್ಮರಡ್ಡಿ ಮಾದಿನಾಳ ಮಾತನಾಡಿದರು.</p>.<p>ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ಹುಲಗಪ್ಪ ವಾಲೇಕಾರ, ಪಾಷಾ ಮುಲ್ಲಾರ, ಖಾಜಸಾಬ ಗುರಿಕಾರ, ಸುಭಾಸ ಕಂದಕೂರು, ಆಫೀಜ ಬೇಗ್ಂ, ಶಾಂತಮ್ಮ ಚೌಡ್ಕಿ, ಹುಸೇನಸಾಬ, ಭಾಗ್ಯಲಕ್ಷ್ಮೀ ಕನಕದಾಸ ಪೂಜಾರ ಹಾಗೂ ಕೀರ್ತಿ ಸೋನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>