ಈ ಬಗ್ಗೆ ಮಂಗಳವಾರ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ತಹಶೀಲ್ದಾರ್,‘ಸೀಲ್ಡೌ
ನ್ ಮಾಡುವ ಪ್ರಶ್ನೆಯೇ ಇಲ್ಲ. ಪುರಸಭೆ ಅಭಿಪ್ರಾಯವನ್ನು ಜಿಲ್ಲಾಡಳಿತದ ಗಮನಕ್ಕೆ ತರಲಾಗಿತ್ತು. ಆದರೆ ‘ಸದ್ಯ ಸರ್ಕಾರ ಹೊರಡಿಸಿರುವ ಲಾಕ್ಡೌನ್ ಮಾರ್ಗಸೂಚಿಯಂತೆ ನಡೆದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಹಾಗಾಗಿ ಬೆಳಿಗ್ಗೆ 10 ಗಂಟೆಯವರೆಗೆ ತರಕಾರಿ, ಹಾಲು, ಹಣ್ಣು, ಮದ್ಯ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟ, ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.