ಕೊರೊನಾಕ್ಕೆ ಮನೆಯೇ ಮದ್ದು, ಮಾಸ್ಕ್ ಹಾಕಿಕೊಳ್ಳಬೇಕು. ದೈಹಿಕ ಅಂತರ, ಸ್ಯಾನಿಟೈಜೇಷನ್ ಸೇರಿದಂತೆ ನಿಯಮಗಳನ್ನು ಅನುಸರಿಸಬೇಕು. ಪ್ರತಿಪಕ್ಷಗಳು ರಾಜಕೀಯ ಮಾಡುತ್ತ ಕಾಲಹರಣ ಮಾಡುತ್ತಾ ಕುಳಿತಿವೆ.ಏನಾದರೂ ಸಕಾರಾತ್ಮಕ ಸಲಹೆಗಳಿದ್ದರೆ ನೀಡಲಿ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಅದು ಬಿಟ್ಟು ಮೂರು ಹೊತ್ತು ಟೀಕೆ ಸರಿಯಲ್ಲ ಎಂದು ಹೇಳಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ ಮೈನಳ್ಳಿ, ಬಿಜೆಪಿನಗರ ಘಟಕದ ಅಧ್ಯಕ್ಷ ಸುನೀಲ್ ಹೆಸರೂರು ಇತರರು ಇದ್ದರು.