ಕ್ಷಯರೋಗ ಪರಿವೀಕ್ಷಕ ಮಲ್ಲಿಕಾರ್ಜುನ ಅವರು ಮಾತನಾಡಿ,‘ಎರಡು ವಾರಕ್ಕೂ ಮೇಲ್ಪಟ್ಟು ಕೆಮ್ಮು, ಸಂಜೆ ವೇಳೆ ಜ್ವರ ಬರುವುದು, ಹಸಿವಾಗದಿರುವುದು, ದೇಹದ ತೂಕ ಕಡಿಮೆಯಾಗುವುದು, ಕತ್ತುಗಳಲ್ಲಿ ಗಡ್ಡೆ ಆಗಿರುವ ಲಕ್ಷಣಗಳು ಕಂಡು ಬಂದಾಗ ಹಾಗೂ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಈ ಲಕ್ಷಣಗಳುಳ್ಳ ವ್ಯಕ್ತಿಗಳು ಗೋಚರಿಸಿದಾಗ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಪರೀಕ್ಷೆಗೆ ಕಳುಹಿಸಿಕೊಡಬೇಕು’ ಎಂದು ಮನವಿ ಮಾಡಿದರು,