<p><strong>ಗಂಗಾವತಿ:</strong> ‘ಕ್ಷಯರೋಗಿಗಳು ಕೊರೊನಾ ಲಕ್ಷಣಗಳು ಕಂಡುಬಂದಾಗ ಮುಜುಗರವಿಲ್ಲದೆ ಪರೀಕ್ಷೆಗೆ ಒಳಪಡಬೇಕು’ ಎಂದು ಸರ್ಕಾರಿ ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ ಸವಡಿ ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಕ್ಷಯರೋಗ ವಿಭಾಗದಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಕ್ಷಯರೋಗಿಗಳಿಗೆ ನಡೆದ ಸಮುದಾಯ ಸಭೆಯಲ್ಲಿ ಮಾತನಾಡಿದರು.</p>.<p>‘ಸಮಯಕ್ಕೆ ಸರಿಯಾಗಿ ಪೌಷ್ಟಿಕ ಆಹಾರ ಸೇವಿಸಬೇಕು. ಸಹವ್ಯಾಧಿ ಸೋಂಕುಗಳ ಪರೀಕ್ಷೆ ಮತ್ತು ಚಿಕಿತ್ಸೆ ಪಡೆಯುತ್ತ ಮಾತ್ರೆ ಸೇವಿಸುವುದರಿಂದ ಕ್ಷಯ ರೋಗವನ್ನು ಸಂಪೂರ್ಣವಾಗಿ ತೊಲಗಿಸಬಹುದು’ ಎಂದರು.</p>.<p>ಕ್ಷಯರೋಗ ಪರಿವೀಕ್ಷಕ ಮಲ್ಲಿಕಾರ್ಜುನ ಅವರು ಮಾತನಾಡಿ,‘ಎರಡು ವಾರಕ್ಕೂ ಮೇಲ್ಪಟ್ಟು ಕೆಮ್ಮು, ಸಂಜೆ ವೇಳೆ ಜ್ವರ ಬರುವುದು, ಹಸಿವಾಗದಿರುವುದು, ದೇಹದ ತೂಕ ಕಡಿಮೆಯಾಗುವುದು, ಕತ್ತುಗಳಲ್ಲಿ ಗಡ್ಡೆ ಆಗಿರುವ ಲಕ್ಷಣಗಳು ಕಂಡು ಬಂದಾಗ ಹಾಗೂ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಈ ಲಕ್ಷಣಗಳುಳ್ಳ ವ್ಯಕ್ತಿಗಳು ಗೋಚರಿಸಿದಾಗ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಪರೀಕ್ಷೆಗೆ ಕಳುಹಿಸಿಕೊಡಬೇಕು’ ಎಂದು ಮನವಿ ಮಾಡಿದರು,</p>.<p>ಆರೋಗ್ಯ ಸಿಬ್ಬಂದಿ ಹುಸೇನ್ ಬಾಷಾ, ದಾನನಗೌಡ, ರಾಘವೇಂದ್ರ ಜೋಶಿ, ಖಾಸಿಂಬಿ, ಹನುಮಂತಪ್ಪ ಹಾಗೂ ಅಂಗನವಾಡಿ ಶಿಕ್ಷಕಿ ಮಮ್ತಾಜ್ ಬೇಗಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ‘ಕ್ಷಯರೋಗಿಗಳು ಕೊರೊನಾ ಲಕ್ಷಣಗಳು ಕಂಡುಬಂದಾಗ ಮುಜುಗರವಿಲ್ಲದೆ ಪರೀಕ್ಷೆಗೆ ಒಳಪಡಬೇಕು’ ಎಂದು ಸರ್ಕಾರಿ ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ ಸವಡಿ ಹೇಳಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಕ್ಷಯರೋಗ ವಿಭಾಗದಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಕ್ಷಯರೋಗಿಗಳಿಗೆ ನಡೆದ ಸಮುದಾಯ ಸಭೆಯಲ್ಲಿ ಮಾತನಾಡಿದರು.</p>.<p>‘ಸಮಯಕ್ಕೆ ಸರಿಯಾಗಿ ಪೌಷ್ಟಿಕ ಆಹಾರ ಸೇವಿಸಬೇಕು. ಸಹವ್ಯಾಧಿ ಸೋಂಕುಗಳ ಪರೀಕ್ಷೆ ಮತ್ತು ಚಿಕಿತ್ಸೆ ಪಡೆಯುತ್ತ ಮಾತ್ರೆ ಸೇವಿಸುವುದರಿಂದ ಕ್ಷಯ ರೋಗವನ್ನು ಸಂಪೂರ್ಣವಾಗಿ ತೊಲಗಿಸಬಹುದು’ ಎಂದರು.</p>.<p>ಕ್ಷಯರೋಗ ಪರಿವೀಕ್ಷಕ ಮಲ್ಲಿಕಾರ್ಜುನ ಅವರು ಮಾತನಾಡಿ,‘ಎರಡು ವಾರಕ್ಕೂ ಮೇಲ್ಪಟ್ಟು ಕೆಮ್ಮು, ಸಂಜೆ ವೇಳೆ ಜ್ವರ ಬರುವುದು, ಹಸಿವಾಗದಿರುವುದು, ದೇಹದ ತೂಕ ಕಡಿಮೆಯಾಗುವುದು, ಕತ್ತುಗಳಲ್ಲಿ ಗಡ್ಡೆ ಆಗಿರುವ ಲಕ್ಷಣಗಳು ಕಂಡು ಬಂದಾಗ ಹಾಗೂ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಈ ಲಕ್ಷಣಗಳುಳ್ಳ ವ್ಯಕ್ತಿಗಳು ಗೋಚರಿಸಿದಾಗ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಪರೀಕ್ಷೆಗೆ ಕಳುಹಿಸಿಕೊಡಬೇಕು’ ಎಂದು ಮನವಿ ಮಾಡಿದರು,</p>.<p>ಆರೋಗ್ಯ ಸಿಬ್ಬಂದಿ ಹುಸೇನ್ ಬಾಷಾ, ದಾನನಗೌಡ, ರಾಘವೇಂದ್ರ ಜೋಶಿ, ಖಾಸಿಂಬಿ, ಹನುಮಂತಪ್ಪ ಹಾಗೂ ಅಂಗನವಾಡಿ ಶಿಕ್ಷಕಿ ಮಮ್ತಾಜ್ ಬೇಗಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>