<p><strong>ಕನಕಗಿರಿ</strong>: ‘ಮುಂಚೂಣಿ ಕಾರ್ಯಕರ್ತರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಕೇಂದ್ರ ಆರಂಭಿಸಲಾಗಿದೆ’ ಎಂದು ನೋಡಲ್ ಅಧಿಕಾರಿ ಹಾಗೂ ಪ್ರೊಬೇಷನರಿ ಉಪ ವಿಭಾಗಾಧಿಕಾರಿ ರಜನೀಕಾಂತ ತಿಳಿಸಿದರು.</p>.<p>ಪಟ್ಟಣದ ಎಪಿಎಂಸಿ ಕಚೇರಿ ಆವರಣದಲ್ಲಿ ಶುಕ್ರವಾರ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>18 ರಿಂದ 44 ವಯಸ್ಸಿನವರಿಗೆ ಲಸಿಕೆ ಹಾಕಲಾಗುತ್ತಿದೆ. ಗಂಜ್, ಬಜಾರ್ ಹಮಾಲರು, ಕಿರಾಣಿ ಅಂಗಡಿ ಮಾಲೀಕರು, ಕಟ್ಟಡ ಕಾರ್ಮಿಕರು, ಹಣ್ಣು, ತರಕಾರಿ ಅಂಗಡಿ ಮಾಲೀಕರು, ಔಷಧಿ ಅಂಗಡಿಯವರು, ಅಂಗವಿಕಲರು, ನ್ಯಾಯ ಬೆಲೆ ಅಂಗಡಿಯವರು ಇತರರಿಗೆ ಈ ಲಸಿಕೆ ಹಾಕಲಾಗುತ್ತಿದೆ. ಮುಂಚೂಣಿ ಕಾರ್ಯಕರ್ತರು ಭಯ ಪಡದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಶಾಸಕ ಬಸವರಾಜ ದಢೇಸೂಗೂರು ಅವರು ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.</p>.<p>ನಂತರ ಮಾತನಾಡಿದ ಅವರು,‘ಸಾರ್ವಜನಿಕರು ಕೊರೊನಾ ಕುರಿತು ಭಯ ಪಡದೆ ಎಚ್ಚರಿಕೆ ವಹಿಸಬೇಕು. ಅನಗತ್ಯವಾಗಿ ಹೊರಗಡೆ ತಿರುಗಾಡಬಾರದು’ ಎಂದರು.</p>.<p>ತಹಶೀಲ್ದಾರ್ ರವಿ ಅಂಗಡಿ ಮಾತನಾಡಿ,‘ತಾಲ್ಲೂಕಿನಲ್ಲಿ ಲಸಿಕೆ ಕೊರತೆ ಇಲ್ಲ. ಕೆಲ ದಿನಗಳ ನಂತರ ಸಾರ್ವಜನಿಕರಿಗೂ ಲಸಿಕೆ ಹಾಕಲಾಗುವುದು’ ಎಂದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿರುಮಲಮ್ಮ, ದಲ್ಲಾಳಿ ವರ್ತಕರ ಸಂಘದ ಮಹಾಂತೇಶ ಸಜ್ಜನ್ ಹಾಗೂ ವರ್ತಕ ಹನುಮೇಶ ಯಲಬುರ್ಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ‘ಮುಂಚೂಣಿ ಕಾರ್ಯಕರ್ತರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಕೇಂದ್ರ ಆರಂಭಿಸಲಾಗಿದೆ’ ಎಂದು ನೋಡಲ್ ಅಧಿಕಾರಿ ಹಾಗೂ ಪ್ರೊಬೇಷನರಿ ಉಪ ವಿಭಾಗಾಧಿಕಾರಿ ರಜನೀಕಾಂತ ತಿಳಿಸಿದರು.</p>.<p>ಪಟ್ಟಣದ ಎಪಿಎಂಸಿ ಕಚೇರಿ ಆವರಣದಲ್ಲಿ ಶುಕ್ರವಾರ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>18 ರಿಂದ 44 ವಯಸ್ಸಿನವರಿಗೆ ಲಸಿಕೆ ಹಾಕಲಾಗುತ್ತಿದೆ. ಗಂಜ್, ಬಜಾರ್ ಹಮಾಲರು, ಕಿರಾಣಿ ಅಂಗಡಿ ಮಾಲೀಕರು, ಕಟ್ಟಡ ಕಾರ್ಮಿಕರು, ಹಣ್ಣು, ತರಕಾರಿ ಅಂಗಡಿ ಮಾಲೀಕರು, ಔಷಧಿ ಅಂಗಡಿಯವರು, ಅಂಗವಿಕಲರು, ನ್ಯಾಯ ಬೆಲೆ ಅಂಗಡಿಯವರು ಇತರರಿಗೆ ಈ ಲಸಿಕೆ ಹಾಕಲಾಗುತ್ತಿದೆ. ಮುಂಚೂಣಿ ಕಾರ್ಯಕರ್ತರು ಭಯ ಪಡದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಶಾಸಕ ಬಸವರಾಜ ದಢೇಸೂಗೂರು ಅವರು ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.</p>.<p>ನಂತರ ಮಾತನಾಡಿದ ಅವರು,‘ಸಾರ್ವಜನಿಕರು ಕೊರೊನಾ ಕುರಿತು ಭಯ ಪಡದೆ ಎಚ್ಚರಿಕೆ ವಹಿಸಬೇಕು. ಅನಗತ್ಯವಾಗಿ ಹೊರಗಡೆ ತಿರುಗಾಡಬಾರದು’ ಎಂದರು.</p>.<p>ತಹಶೀಲ್ದಾರ್ ರವಿ ಅಂಗಡಿ ಮಾತನಾಡಿ,‘ತಾಲ್ಲೂಕಿನಲ್ಲಿ ಲಸಿಕೆ ಕೊರತೆ ಇಲ್ಲ. ಕೆಲ ದಿನಗಳ ನಂತರ ಸಾರ್ವಜನಿಕರಿಗೂ ಲಸಿಕೆ ಹಾಕಲಾಗುವುದು’ ಎಂದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿರುಮಲಮ್ಮ, ದಲ್ಲಾಳಿ ವರ್ತಕರ ಸಂಘದ ಮಹಾಂತೇಶ ಸಜ್ಜನ್ ಹಾಗೂ ವರ್ತಕ ಹನುಮೇಶ ಯಲಬುರ್ಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>