ಕೊಪ್ಪಳ:ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ನಗರದ 1ನೇ ವಾರ್ಡಿನ ಸಿರಸಪ್ಪಯ್ಯನಮಠದ ಸಮೀಪದ 40 ವರ್ಷ ವ್ಯಕ್ತಿ ಚಿಕಿತ್ಸೆ ಫಲಿಸದೆಬೆಳಿಗ್ಗೆ ಮೃತರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾಕ್ಕೆ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿದೆ.
ಕೋವಿಡ್ ಚಿಕಿತ್ಸೆಗಾಗಿ ವಾರದ ಹಿಂದೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಮೃತರಾಗಿದ್ದಾರೆ. ಮೃತರ ದೇಹವನ್ನು ವೈಜ್ಞಾನಿಕವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.