ಕಾರಟಗಿ ತಾಲ್ಲೂಕಿನ ದೇವಪ್ಪ (75) ಕಳೆದ ಮೂರು ದಿನಗಳ ಹಿಂದೆ ನಗರದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಸಂಬಂಧಿಕರು ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ವೈದ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಆಸ್ಪತ್ರೆ ಸಿಬ್ಬಂದಿ ನಗರಠಾಣೆ ಎದುರು ಪ್ರತಿಭಟನೆ ನಡೆಸಿದರು.