ಕೋವಿಡ್ ಸೋಂಕು ಹೆಚ್ಚುತ್ತಿರುವುದು ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ 1-9ನೇ ತರಗತಿ ಮಕ್ಕಳು ಭಾಗಿಯಾಗುವುದು ಬೇಡ ಎಂದು ಪೂರ್ವಸಿದ್ಧತೆ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಆದರೆ ಪಟ್ಟಣದ ಅನೇಕ ಶಾಲೆಗಳ ಮಕ್ಕಳು ಒಂದೇ ಕಡೆ ಜಮಾಯಿಸಿದ್ದರು. ಬೆರಳೆಣಿಕೆ ಮಕ್ಕಳು ಮಾತ್ರ ಮಾಸ್ಕ್ ಹಾಕಿಕೊಂಡಿದ್ದು ಕಂಡುಬಂದಿತು. ಅವರಲ್ಲಿನ ಅನೇಕ ಮಕ್ಕಳು ಶೀತ, ಕೆಮ್ಮು, ನೆಗಡಿಯಿಂದ ಬಳಲುತ್ತಿರುವುದು ತಿಳಿಯಿತು.