<p><strong>ಗಂಗಾವತಿ:</strong> ‘ದೇಶದ ಎಲ್ಲ ರಾಜ್ಯಗಳಲ್ಲಿ ಒಂದೇ ದಿನ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ’ ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.</p>.<p>ಇಲ್ಲಿನ ಎಂಎನ್ಎಂ ಬಾಲಕಿಯರ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ, ಮಾತನಾಡಿದರು.</p>.<p>ದೇಶ ಮತ್ತು ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡಲು ಹಾಗೂ ಮಕ್ಕಳ ಜೀವ ರಕ್ಷಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್ ಲಸಿಕೆ ನೀಡುವ ನಿರ್ಧಾರ ಕೈಗೊಂಡಿವೆ. 2 ಕೋವಿಡ್ ಅಲೆಗಳಲ್ಲಿ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ. ಇಂಥ ದುರ್ಘಟನೆಗಳು ನಡೆಯದಂತೆ ತಡೆಗಟ್ಟಲು, ಲಸಿಕೆ ಪಡೆಯುವುದು ಒಂದೇ ಮಾರ್ಗ ಎಂದು ಹೇಳಿದರು.</p>.<p>ಒಂದು ವೇಳೆ ವಿದ್ಯಾರ್ಥಿಗಳು ಇತರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಲ್ಲಿ, ವೈದ್ಯರ ಸಲಹೆ ಮೇರೆಗೆ ಲಸಿಕೆ ಹಾಕಿಸಿಕೊಳ್ಳುವುದನ್ನು ಮುಂದೂಡಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.</p>.<p>ಈ ವೇಳೆಯಲ್ಲಿ ಕೊಟ್ಟುರೇಶ್ವರ ಸ್ವಾಮೀಜಿ, ತಾ.ಪಂ ಇಒ ಡಾ.ಡಿ ಮೋಹನ್ ಮಾತನಾಡಿದರು.</p>.<p>ನಗರದಲ್ಲಿ ವೈದ್ಯಕೀಯ, ಆಶಾ ಕಾರ್ಯಕರ್ತೆರು, ಪ್ರಾಥಮಿಕ ಚಿಕಿತ್ಸಾ ಕೇಂದ್ರ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರನ್ನು ಒಳಗೊಂಡ 4 ತಂಡಗಳನ್ನು ರಚಿಸಿ, ಸರೋಜಮ್ಮ ಪ್ರೌಢ ಮತ್ತು ಪದವಿ ಪೂರ್ವ ಕಾಲೇಜು, ಜೆ.ಎಸ್.ಎಸ್ ಪ್ರೌಢ ಶಾಲೆ, ಎಂಎನ್ಎಂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು, ವಿದ್ಯಾನಗರದ ತೆಲುಗು ಪ್ರೌಢಶಾಲೆಗಳಿಗೆ ಕಳುಹಿಸಿ, ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕೆಲಸ ಮಾಡಲಾಯಿತು.</p>.<p class="Subhead"><strong>ಎಲ್ಲೆಲ್ಲಿ:</strong> ತಾಲ್ಲೂಕಿನ ಆನೆಗೊಂದಿ ಪ್ರೌಢಶಾಲೆ, ವಡ್ಡರಹಟ್ಟಿ ಪ್ರೌಢಶಾಲೆ, ಹೇರೂರು ಪ್ರೌಢಶಾಲೆ, ಬಸಾಪಟ್ಟಣ, ವೆಂಕಟಗಿರಿ, ಆರ್ಹಾಳ ಪ್ರೌಢ ಶಾಲೆಗಳಲ್ಲಿ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.</p>.<p>ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಬಿಇಒ: ಇಲ್ಲಿನ ಎಂಎನ್ಎಂ ಬಾಲಕಿಯರ ಪ್ರೌಢಶಾಲೆಗೆ ಬಿಇಓ ಸೋಮಶೇಖರಗೌಡ ಭೇಟಿ ನೀಡಿ, ಲಸಿಕೆ ಪಡೆದರೆ ಆಗುವ ಲಾಭಗಳು ಕುರಿತು ವಿದ್ಯಾರ್ಥಿನಿಯರಿಗೆ ಸಂಕ್ಷಿಪ್ತ ಮಾಹಿತಿ ನೀಡಿ, ಲಸಿಕೆ ಪಡೆಯುವ ಕುರಿತು ಧೈರ್ಯ ತುಂಬಿದರು.</p>.<p>ಗ್ರೇಡ್-2 ತಹಶೀಲ್ದಾರ್ ವಿ.ಎಚ್.ಹೊರಪೇಟಿ, ಕೊಟ್ಟುರೇಶ್ವರ ಸ್ವಾಮೀಜಿ, ಶರಣೆಗೌಡ, ಜಿಲ್ಲಾ ಸರ್ಜನ್ ಡಾ.ಈಶ್ವರ ಸವಡಿ, ಡಾ.ರಾಧಿಕಾ, ನಗರಸಭೆ ಸದಸ್ಯ ವಾಸುದೇವ ನವಲಿ ಸೇರಿದಂತೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ‘ದೇಶದ ಎಲ್ಲ ರಾಜ್ಯಗಳಲ್ಲಿ ಒಂದೇ ದಿನ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ’ ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.</p>.<p>ಇಲ್ಲಿನ ಎಂಎನ್ಎಂ ಬಾಲಕಿಯರ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ, ಮಾತನಾಡಿದರು.</p>.<p>ದೇಶ ಮತ್ತು ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡಲು ಹಾಗೂ ಮಕ್ಕಳ ಜೀವ ರಕ್ಷಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್ ಲಸಿಕೆ ನೀಡುವ ನಿರ್ಧಾರ ಕೈಗೊಂಡಿವೆ. 2 ಕೋವಿಡ್ ಅಲೆಗಳಲ್ಲಿ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ. ಇಂಥ ದುರ್ಘಟನೆಗಳು ನಡೆಯದಂತೆ ತಡೆಗಟ್ಟಲು, ಲಸಿಕೆ ಪಡೆಯುವುದು ಒಂದೇ ಮಾರ್ಗ ಎಂದು ಹೇಳಿದರು.</p>.<p>ಒಂದು ವೇಳೆ ವಿದ್ಯಾರ್ಥಿಗಳು ಇತರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಲ್ಲಿ, ವೈದ್ಯರ ಸಲಹೆ ಮೇರೆಗೆ ಲಸಿಕೆ ಹಾಕಿಸಿಕೊಳ್ಳುವುದನ್ನು ಮುಂದೂಡಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.</p>.<p>ಈ ವೇಳೆಯಲ್ಲಿ ಕೊಟ್ಟುರೇಶ್ವರ ಸ್ವಾಮೀಜಿ, ತಾ.ಪಂ ಇಒ ಡಾ.ಡಿ ಮೋಹನ್ ಮಾತನಾಡಿದರು.</p>.<p>ನಗರದಲ್ಲಿ ವೈದ್ಯಕೀಯ, ಆಶಾ ಕಾರ್ಯಕರ್ತೆರು, ಪ್ರಾಥಮಿಕ ಚಿಕಿತ್ಸಾ ಕೇಂದ್ರ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರನ್ನು ಒಳಗೊಂಡ 4 ತಂಡಗಳನ್ನು ರಚಿಸಿ, ಸರೋಜಮ್ಮ ಪ್ರೌಢ ಮತ್ತು ಪದವಿ ಪೂರ್ವ ಕಾಲೇಜು, ಜೆ.ಎಸ್.ಎಸ್ ಪ್ರೌಢ ಶಾಲೆ, ಎಂಎನ್ಎಂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು, ವಿದ್ಯಾನಗರದ ತೆಲುಗು ಪ್ರೌಢಶಾಲೆಗಳಿಗೆ ಕಳುಹಿಸಿ, ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕೆಲಸ ಮಾಡಲಾಯಿತು.</p>.<p class="Subhead"><strong>ಎಲ್ಲೆಲ್ಲಿ:</strong> ತಾಲ್ಲೂಕಿನ ಆನೆಗೊಂದಿ ಪ್ರೌಢಶಾಲೆ, ವಡ್ಡರಹಟ್ಟಿ ಪ್ರೌಢಶಾಲೆ, ಹೇರೂರು ಪ್ರೌಢಶಾಲೆ, ಬಸಾಪಟ್ಟಣ, ವೆಂಕಟಗಿರಿ, ಆರ್ಹಾಳ ಪ್ರೌಢ ಶಾಲೆಗಳಲ್ಲಿ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.</p>.<p>ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಬಿಇಒ: ಇಲ್ಲಿನ ಎಂಎನ್ಎಂ ಬಾಲಕಿಯರ ಪ್ರೌಢಶಾಲೆಗೆ ಬಿಇಓ ಸೋಮಶೇಖರಗೌಡ ಭೇಟಿ ನೀಡಿ, ಲಸಿಕೆ ಪಡೆದರೆ ಆಗುವ ಲಾಭಗಳು ಕುರಿತು ವಿದ್ಯಾರ್ಥಿನಿಯರಿಗೆ ಸಂಕ್ಷಿಪ್ತ ಮಾಹಿತಿ ನೀಡಿ, ಲಸಿಕೆ ಪಡೆಯುವ ಕುರಿತು ಧೈರ್ಯ ತುಂಬಿದರು.</p>.<p>ಗ್ರೇಡ್-2 ತಹಶೀಲ್ದಾರ್ ವಿ.ಎಚ್.ಹೊರಪೇಟಿ, ಕೊಟ್ಟುರೇಶ್ವರ ಸ್ವಾಮೀಜಿ, ಶರಣೆಗೌಡ, ಜಿಲ್ಲಾ ಸರ್ಜನ್ ಡಾ.ಈಶ್ವರ ಸವಡಿ, ಡಾ.ರಾಧಿಕಾ, ನಗರಸಭೆ ಸದಸ್ಯ ವಾಸುದೇವ ನವಲಿ ಸೇರಿದಂತೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>