ಪಂಚಾಯಿತಿ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರು ವ್ಯಾಪಕ ಪ್ರಚಾರ ಕೈಗೊಂಡು ಜನರು ರೋಗದಿಂದ ಮುಕ್ತರಾಗಲು ಕ್ರಮಕೈಗೊಳ್ಳುತ್ತಿದ್ದಾರೆ. ದೇಶವೇ ಸಂಕಷ್ಟದಲ್ಲಿರುವ ಪ್ರಸ್ತುತ ಸಂದರ್ಭದಲ್ಲಿ ಜನರ ಹಿತಕ್ಕಾಗಿ ಹೆಚ್ಚಿನ ಕೆಲಸ ಮಾಡುತ್ತಿರುವುದರಿಂದ ಬೇಸರವಾಗಿಲ್ಲ. ಸಾರ್ವಜನಿಕರು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗಿದೆ ಎಂದು ಸಿಬ್ಬಂದಿ ರಾಮಪ್ಪ ಹಾಗೂ ಪೌರ ಕಾರ್ಮಿಕ ರೇಣುಕಪ್ಪ ಹೇಳಿದ್ದಾರೆ.