ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದರು. ಗುರುವಾರ ಮನೆಯವರ ಜತೆ ಮಾತನಾಡಿ, ಆರೋಗ್ಯದಿಂದ ಇರುವುದಾಗಿ ತಿಳಿಸಿದ್ದಾರೆ. ಶೀಘ್ರ ಗುಣಮುಖನಾಗುವುದಾಗಿಯೂ ಹೇಳಿದ್ದರು. ಆಸ್ಪತ್ರೆಯ ವೈದ್ಯರು ಕೂಡಾ ಚೆನ್ನಾಗಿದ್ದಾರೆ ಎಂದು ಹೇಳಿದ್ದರು. ಈಗ ಹೀಗೆ ಆಗಿದೆ ಎಂದು ಕುಟುಂಬದ ಸದಸ್ಯರು ಅಳಲು ತೋಡಿಕೊಂಡರು.