ಸಂಘಟನೆ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಮಾತನಾಡಿ, ಪೂರ್ವ-ನಿಯೋಜಿತ ರೀತಿಯಲ್ಲಿ ಸಿಪಿಐ(ಎಂ)ನ ರಾಜ್ಯಸಮಿತಿ ಕಚೇರಿ ಸೇರಿದಂತೆ ವಿವಿಧ ಕಚೇರಿಗಳ ಮೇಲೆ ಬಿಜೆಪಿಯ ಮಂದಿ ದೊಂಬಿ, ಹಲ್ಲೆ ನಡೆಸಿದ್ದಾರೆ. ಉದಯಪುರ ಸಬ್ ಡಿವಿಜನಲ್ ಸಮಿತಿ, ಗೋಮತಿ ಜಿಲ್ಲಾ ಸಮಿತಿ, ಸೆಪಾಹಿಜಾಲ ಜಿಲ್ಲಾ ಸಮಿತಿ, ಬಿಶಾಲ್ಗಡ್ ಸಬ್ ಡಿವಿಜನಲ್ ಸಮಿತಿ, ಪಶ್ಚಿಮ ತ್ರಿಪುರಾ ಜಿಲ್ಲಾ ಸಮಿತಿ ಕಚೇರಿ ಸೇರಿದಂತೆ ಇತರೆ ಕಚೇರಿಗಳು ಸುಟ್ಟು ಕರಕಲಾಗಿವೆ. ಜೊತೆಗೆ ಅಗರ್ತಲಾದಲ್ಲಿನ ರಾಜ್ಯ ಸಮಿತಿ ಕಚೇರಿ ನೆಲಮಹಡಿ ಮತ್ತು ಮೊದಲನೇ ಮಹಡಿಯನ್ನು ಲೂಟಿ ಮಾಡಿ, ಎರಡು ಕಾರುಗಳನ್ನು ಸುಟ್ಟು, ತ್ರಿಪುರಾ ಜನತೆಯ ಅತ್ಯಂತ ಗೌರವಪಾತ್ರ ನೇತಾರ ದಶರಥ್ ದೇಬ್ ಅವರ ಪ್ರತಿಮೆ ಒಡೆಯಲಾಗಿದೆ ಎಂದು ದೂರಿದರು.