<p><strong>ಕೊಪ್ಪಳ:</strong> ತಾಲ್ಲೂಕಿನ ಮಂಗಳಾಪುರದಲ್ಲಿ ಶವ ಸಂಸ್ಕಾರ ನಡೆಸಲು ಸ್ಮಶಾನ ಜಾಗವಿಲ್ಲದ್ದಕ್ಕೆ ಮಂಗಳವಾರ ಗಲಾಟೆ ನಡೆದಿದ್ದ ಕಾರಣ ಬುಧವಾರ ಅಧಿಕಾರಿಗಳ ಗ್ರಾಮದಲ್ಲಿ ಸಭೆ ನಡೆಸಿ ಸ್ಮಶಾನಕ್ಕಾಗಿ ಜಾಗ ನೀಡಲು ಜನರಿಗೆ ಒಂದು ದಿನ ಕಾಲಾವಕಾಶ ನೀಡಿದ್ದಾರೆ.</p>.<p>ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ ಹಾಗೂ ಗ್ರಾಮೀಣ ಠಾಣೆಯ ಪಿಎಸ್ಐ ಅಶೋಕ ಬೇವೂರು ಅವರ ಸಮ್ಮುಖದಲ್ಲಿ ನಡೆದ ಗ್ರಾಮಸಭೆಯಲ್ಲಿ ಸ್ಮಶಾನಕ್ಕಾಗಿ ಭೂಮಿ ನೀಡುವ ಕುರಿತು ಚರ್ಚೆ ನಡೆಯಿತು.</p>.<p>’ಗ್ರಾಮದ ಸಮೀಪದಲ್ಲಿ ಭೂಮಿ ಹೊಂದಿರುವವರು ಸ್ವಯಂಪ್ರೇರಿತರಾಗಿ ಜಾಗ ನೀಡುವುದಾದರೆ ಒಂದು ದಿನದಲ್ಲಿ ತಿಳಿಸಿದರೆ ನೇರವಾಗಿ ಖರೀದಿ ಮಾಡಲಾಗುವುದು. ಇಲ್ಲವಾದರೆ ಗ್ರಾಮಕ್ಕೆ ಒಂದು ಕಿ.ಮೀ. ದೂರದಲ್ಲಿ ಎರಡು ಎಕರೆ ಸರ್ಕಾರಿ ಭೂಮಿಯಿದ್ದು ಅದನ್ನೇ ಸ್ಮಶಾನಕ್ಕಾಗಿ ನೀಡಲಾಗುವುದು’ ಎಂದು ಅಧಿಕಾರಿಗಳು ಹೇಳಿದರು.</p>.<p>ಆಗ ಕೆಲ ಗ್ರಾಮಸ್ಥರು ನಮ್ಮೂರಿನ ಸಮೀಪದಲ್ಲಿಯೇ ಜಾಗ ನೀಡಿ ಎಂದರೆ, ಇನ್ನೂ ಕೆಲವರು ಹಳ್ಳಕ್ಕೆ ಹೋಗುವ ದಾರಿಯಲ್ಲಿ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿದರು. ಒತ್ತುವರಿ ಬಗ್ಗೆ ಪರಿಶೀಲನೆ ನಡೆಸಲು ಜು. 17ರಂದು ಸರ್ವೆ ಮಾಡಿ ನೋಟಿಸ್ ಜಾರಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಗ್ರಾಮದ ವ್ಯಕ್ತಿಯೊಬ್ಬರು ಗ್ರಾಮದ ಸಮೀಪದಲ್ಲಿ ಒಂದು ಎಕರೆ ಜಾಗ ಹೊಂದಿದ್ದು ನೀಡುವ ಬಗ್ಗೆ ನಿರ್ಧರಿಸಿಲ್ಲ. ಒಂದು ದಿನದಲ್ಲಿ ಈ ಕುರಿತು ತೀರ್ಮಾನಿಸಬೇಕು ಎಂದು ಅಧಿಕಾರಿಗಳು ಸೂಚಿಸಿದರು.</p>.<p>ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣಕ್ಕೆ ಆಕ್ರೋಶಗೊಂಡಿದ್ದ ಜನ ಶಾಲೆಯ ಮುಂದಿನ ಆವರಣದಲ್ಲಿ ಅಂತಿಮ ಸಂಸ್ಕಾರಕ್ಕೆ ಕಟ್ಟಿಗೆಗಳನ್ನು ಜೋಡಿಸಿಕೊಂಡು ಸಿದ್ಧತೆ ಮಾಡಿಕೊಂಡಿದ್ದರು. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದಾಗ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.</p>.<div><blockquote>ನೇರ ಖರೀದಿಗೆ ಭೂಮಿ ಕೊಡುವವರಿಗೆ ಒಂದು ದಿನ ಕಾಲಾವಕಾಶ ಕೊಡಲಾಗುತ್ತದೆ. ಇಲ್ಲವಾದರೆ ಎರಡು ಎಕರೆ ಸರ್ಕಾರಿ ಭೂಮಿ ಗುರುತಿಸಲಾಗಿದ್ದು ಅಲ್ಲಿಯೇ ಸ್ಮಶಾನಕ್ಕೆ ಜಾಗ ನಿಗದಿ ಮಾಡಲಾಗುವುದು. </blockquote><span class="attribution">-ವಿಠ್ಠಲ ಚೌಗುಲಾ ಕೊಪ್ಪಳ ತಹಶೀಲ್ದಾರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ತಾಲ್ಲೂಕಿನ ಮಂಗಳಾಪುರದಲ್ಲಿ ಶವ ಸಂಸ್ಕಾರ ನಡೆಸಲು ಸ್ಮಶಾನ ಜಾಗವಿಲ್ಲದ್ದಕ್ಕೆ ಮಂಗಳವಾರ ಗಲಾಟೆ ನಡೆದಿದ್ದ ಕಾರಣ ಬುಧವಾರ ಅಧಿಕಾರಿಗಳ ಗ್ರಾಮದಲ್ಲಿ ಸಭೆ ನಡೆಸಿ ಸ್ಮಶಾನಕ್ಕಾಗಿ ಜಾಗ ನೀಡಲು ಜನರಿಗೆ ಒಂದು ದಿನ ಕಾಲಾವಕಾಶ ನೀಡಿದ್ದಾರೆ.</p>.<p>ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ ಹಾಗೂ ಗ್ರಾಮೀಣ ಠಾಣೆಯ ಪಿಎಸ್ಐ ಅಶೋಕ ಬೇವೂರು ಅವರ ಸಮ್ಮುಖದಲ್ಲಿ ನಡೆದ ಗ್ರಾಮಸಭೆಯಲ್ಲಿ ಸ್ಮಶಾನಕ್ಕಾಗಿ ಭೂಮಿ ನೀಡುವ ಕುರಿತು ಚರ್ಚೆ ನಡೆಯಿತು.</p>.<p>’ಗ್ರಾಮದ ಸಮೀಪದಲ್ಲಿ ಭೂಮಿ ಹೊಂದಿರುವವರು ಸ್ವಯಂಪ್ರೇರಿತರಾಗಿ ಜಾಗ ನೀಡುವುದಾದರೆ ಒಂದು ದಿನದಲ್ಲಿ ತಿಳಿಸಿದರೆ ನೇರವಾಗಿ ಖರೀದಿ ಮಾಡಲಾಗುವುದು. ಇಲ್ಲವಾದರೆ ಗ್ರಾಮಕ್ಕೆ ಒಂದು ಕಿ.ಮೀ. ದೂರದಲ್ಲಿ ಎರಡು ಎಕರೆ ಸರ್ಕಾರಿ ಭೂಮಿಯಿದ್ದು ಅದನ್ನೇ ಸ್ಮಶಾನಕ್ಕಾಗಿ ನೀಡಲಾಗುವುದು’ ಎಂದು ಅಧಿಕಾರಿಗಳು ಹೇಳಿದರು.</p>.<p>ಆಗ ಕೆಲ ಗ್ರಾಮಸ್ಥರು ನಮ್ಮೂರಿನ ಸಮೀಪದಲ್ಲಿಯೇ ಜಾಗ ನೀಡಿ ಎಂದರೆ, ಇನ್ನೂ ಕೆಲವರು ಹಳ್ಳಕ್ಕೆ ಹೋಗುವ ದಾರಿಯಲ್ಲಿ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿದರು. ಒತ್ತುವರಿ ಬಗ್ಗೆ ಪರಿಶೀಲನೆ ನಡೆಸಲು ಜು. 17ರಂದು ಸರ್ವೆ ಮಾಡಿ ನೋಟಿಸ್ ಜಾರಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಗ್ರಾಮದ ವ್ಯಕ್ತಿಯೊಬ್ಬರು ಗ್ರಾಮದ ಸಮೀಪದಲ್ಲಿ ಒಂದು ಎಕರೆ ಜಾಗ ಹೊಂದಿದ್ದು ನೀಡುವ ಬಗ್ಗೆ ನಿರ್ಧರಿಸಿಲ್ಲ. ಒಂದು ದಿನದಲ್ಲಿ ಈ ಕುರಿತು ತೀರ್ಮಾನಿಸಬೇಕು ಎಂದು ಅಧಿಕಾರಿಗಳು ಸೂಚಿಸಿದರು.</p>.<p>ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣಕ್ಕೆ ಆಕ್ರೋಶಗೊಂಡಿದ್ದ ಜನ ಶಾಲೆಯ ಮುಂದಿನ ಆವರಣದಲ್ಲಿ ಅಂತಿಮ ಸಂಸ್ಕಾರಕ್ಕೆ ಕಟ್ಟಿಗೆಗಳನ್ನು ಜೋಡಿಸಿಕೊಂಡು ಸಿದ್ಧತೆ ಮಾಡಿಕೊಂಡಿದ್ದರು. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದಾಗ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.</p>.<div><blockquote>ನೇರ ಖರೀದಿಗೆ ಭೂಮಿ ಕೊಡುವವರಿಗೆ ಒಂದು ದಿನ ಕಾಲಾವಕಾಶ ಕೊಡಲಾಗುತ್ತದೆ. ಇಲ್ಲವಾದರೆ ಎರಡು ಎಕರೆ ಸರ್ಕಾರಿ ಭೂಮಿ ಗುರುತಿಸಲಾಗಿದ್ದು ಅಲ್ಲಿಯೇ ಸ್ಮಶಾನಕ್ಕೆ ಜಾಗ ನಿಗದಿ ಮಾಡಲಾಗುವುದು. </blockquote><span class="attribution">-ವಿಠ್ಠಲ ಚೌಗುಲಾ ಕೊಪ್ಪಳ ತಹಶೀಲ್ದಾರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>