<p><strong>ಕುಷ್ಟಗಿ:</strong> ರಸ್ತೆ ಪಕ್ಕದ ಮನೆಗೆ ಲಾರಿ ನುಗ್ಗಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಪ್ರಕರಣ ತಾಲ್ಲೂಕಿನ ಗುಮಗೇರಿ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.</p>.<p>ಬಸಮ್ಮ ಲಕ್ಷ್ಮಣ ಗಿರಣಿ (45) ಮೃತ ಮಹಿಳೆ. ಲಕ್ಷ್ಮಣ ಗಿರಣಿ, ಮರಕಟ್ಟು ಗ್ರಾಮಕ್ಕೆ ಸೇರಿದ 3 ವರ್ಷದ ಬಾಲಕ ನಾಗರಾಜ, ಮಂಜುಳಾ ಗಿರಣಿ ಮತ್ತು ರೇಖಾ ಗಿರಣಿ ಎಂಬುವವರು ಗಾಯಗೊಂಡಿದ್ದಾರೆ. ಇವರಲ್ಲಿ ಲಕ್ಷ್ಮಣ ಮತ್ತು ಬಾಲಕ ನಾಗರಾಜ ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಬಾಗಲಕೋಟೆಯ ಖಾಸಗಿ ಮತ್ತು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಸ್ಥಳಕ್ಕೆ ತೆರಳಿದ ಪೊಲೀಸರು ಗ್ರಾಮಸ್ಥರ ಸಹಕಾರದೊಂದಿಗೆ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>ಬೇಸಿಗೆಯಾಗಿದ್ದರಿಂದ ಐವರು ಮನೆಯ ಮುಂದಿನ ಬಯಲಿನಲ್ಲಿ ಮಲಗಿದ್ದರು. ಬಾಗಲಕೋಟೆಯಿಂದ ಸಿಂಧನೂರು ಕಡೆಗೆ ತೆರಳುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಗ್ರಾಮದ ಪಕ್ಕದ ಮನೆಯತ್ತ ನುಗ್ಗಿದೆ.</p>.<p>ಪರಿಶಿಷ್ಟ ಜಾತಿಗೆ ಸೇರಿದ ಈ ಕುಟುಂಬದವರು ಕೂಲಿಕಾರರಾಗಿದ್ದು ಬಡತನದಲ್ಲಿ ಬದುಕು ಸಾಗಿಸುತ್ತಿದ್ದಾರೆ. ಗ್ರಾಮದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ರಸ್ತೆ ಪಕ್ಕದ ಮನೆಗೆ ಲಾರಿ ನುಗ್ಗಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಪ್ರಕರಣ ತಾಲ್ಲೂಕಿನ ಗುಮಗೇರಿ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.</p>.<p>ಬಸಮ್ಮ ಲಕ್ಷ್ಮಣ ಗಿರಣಿ (45) ಮೃತ ಮಹಿಳೆ. ಲಕ್ಷ್ಮಣ ಗಿರಣಿ, ಮರಕಟ್ಟು ಗ್ರಾಮಕ್ಕೆ ಸೇರಿದ 3 ವರ್ಷದ ಬಾಲಕ ನಾಗರಾಜ, ಮಂಜುಳಾ ಗಿರಣಿ ಮತ್ತು ರೇಖಾ ಗಿರಣಿ ಎಂಬುವವರು ಗಾಯಗೊಂಡಿದ್ದಾರೆ. ಇವರಲ್ಲಿ ಲಕ್ಷ್ಮಣ ಮತ್ತು ಬಾಲಕ ನಾಗರಾಜ ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಬಾಗಲಕೋಟೆಯ ಖಾಸಗಿ ಮತ್ತು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಸ್ಥಳಕ್ಕೆ ತೆರಳಿದ ಪೊಲೀಸರು ಗ್ರಾಮಸ್ಥರ ಸಹಕಾರದೊಂದಿಗೆ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>ಬೇಸಿಗೆಯಾಗಿದ್ದರಿಂದ ಐವರು ಮನೆಯ ಮುಂದಿನ ಬಯಲಿನಲ್ಲಿ ಮಲಗಿದ್ದರು. ಬಾಗಲಕೋಟೆಯಿಂದ ಸಿಂಧನೂರು ಕಡೆಗೆ ತೆರಳುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಗ್ರಾಮದ ಪಕ್ಕದ ಮನೆಯತ್ತ ನುಗ್ಗಿದೆ.</p>.<p>ಪರಿಶಿಷ್ಟ ಜಾತಿಗೆ ಸೇರಿದ ಈ ಕುಟುಂಬದವರು ಕೂಲಿಕಾರರಾಗಿದ್ದು ಬಡತನದಲ್ಲಿ ಬದುಕು ಸಾಗಿಸುತ್ತಿದ್ದಾರೆ. ಗ್ರಾಮದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>