<p><strong>ತಾವರಗೇರಾ: </strong>ಕಳ್ಳರು ಹಾಗಲಕಾಯಿ ಕಿತ್ತುಕೊಂಡು ಹೋಗಿದ್ದರಿಂದ ಸಂಕಷ್ಟಕ್ಕೆ ಸಿಲುಕಿರುವ ಸಮೀಪದ ಬಚನಾಳ ಗ್ರಾಮದ ರೈತ ಪಂಪಯ್ಯ ಅವರ ಹೊಲಕ್ಕೆ ಶಾಸಕ ಅಮರೇಗೌಡ ಬಯ್ಯಾಪುರ ಭಾನುವಾರ ಭೇಟಿ ನೀಡಿದರು. ₹10 ಸಾವಿರ ವೈಯಕ್ತಿಕ ಪರಿಹಾರ ನೀಡಿದರು.</p>.<p>ಈ ಸಂಬಂಧ ‘ಪ್ರಜಾವಾಣಿ’ಯ ಜುಲೈ 11 ರ ಸಂಚಿಕೆಯಲ್ಲಿ ‘ಬಚನಾಳ: ಹಾಗಲಕಾಯಿ ಕಳವು’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.</p>.<p>ಶಾಸಕ ಅಮರೇಗೌಡ ಬಯ್ಯಾಪುರ ಮಾತನಾಡಿ,‘ರೈತರ ಬೆಳೆ ಕಿತ್ತುಕೊಂಡು ಹೋಗಿರುವುದು ನಾಚಿಕೆಗೇಡಿನ ಸಂಗತಿ. ನಮ್ಮ ರೈತರು ಕಷ್ಟಪಟ್ಟು ಸಾಲ ಮಾಡಿ ಬೆಳೆ ಬೆಳೆದಿರುತ್ತಾರೆ. ಇಂಥ ಘಟನೆಗಳಿಂದ ಅವರ ಕುಟುಂಬಕ್ಕೆ ನಷ್ಟವಾಗುತ್ತಿದೆ. ಕಿಡಿಗೇಡಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ರೈತ ಪಂಪಯ್ಯ, ಮರಿಯಪ್ಪ ವಕೀಲ ಹಾಗೂ ಲಿಂಗದಹಳ್ಳಿ ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾವರಗೇರಾ: </strong>ಕಳ್ಳರು ಹಾಗಲಕಾಯಿ ಕಿತ್ತುಕೊಂಡು ಹೋಗಿದ್ದರಿಂದ ಸಂಕಷ್ಟಕ್ಕೆ ಸಿಲುಕಿರುವ ಸಮೀಪದ ಬಚನಾಳ ಗ್ರಾಮದ ರೈತ ಪಂಪಯ್ಯ ಅವರ ಹೊಲಕ್ಕೆ ಶಾಸಕ ಅಮರೇಗೌಡ ಬಯ್ಯಾಪುರ ಭಾನುವಾರ ಭೇಟಿ ನೀಡಿದರು. ₹10 ಸಾವಿರ ವೈಯಕ್ತಿಕ ಪರಿಹಾರ ನೀಡಿದರು.</p>.<p>ಈ ಸಂಬಂಧ ‘ಪ್ರಜಾವಾಣಿ’ಯ ಜುಲೈ 11 ರ ಸಂಚಿಕೆಯಲ್ಲಿ ‘ಬಚನಾಳ: ಹಾಗಲಕಾಯಿ ಕಳವು’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.</p>.<p>ಶಾಸಕ ಅಮರೇಗೌಡ ಬಯ್ಯಾಪುರ ಮಾತನಾಡಿ,‘ರೈತರ ಬೆಳೆ ಕಿತ್ತುಕೊಂಡು ಹೋಗಿರುವುದು ನಾಚಿಕೆಗೇಡಿನ ಸಂಗತಿ. ನಮ್ಮ ರೈತರು ಕಷ್ಟಪಟ್ಟು ಸಾಲ ಮಾಡಿ ಬೆಳೆ ಬೆಳೆದಿರುತ್ತಾರೆ. ಇಂಥ ಘಟನೆಗಳಿಂದ ಅವರ ಕುಟುಂಬಕ್ಕೆ ನಷ್ಟವಾಗುತ್ತಿದೆ. ಕಿಡಿಗೇಡಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ರೈತ ಪಂಪಯ್ಯ, ಮರಿಯಪ್ಪ ವಕೀಲ ಹಾಗೂ ಲಿಂಗದಹಳ್ಳಿ ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>