<p><strong>ಕೊಪ್ಪಳ</strong>: ತುಂಗಭದ್ರಾ ಜಲಾಶಯದಲ್ಲಿ ಗೇಟ್ ಅಳವಡಿಕೆ ಕಾರ್ಯಕ್ಕೆ ಗೇಟ್ಗಳನ್ನು ತಯಾರಿಸುವ ಕಾರ್ಯ ಚುರುಕಾಗಿ ನಡೆದಿದ್ದು ಎಲ್ಲ ಮೂರು ಕೇಂದ್ರಗಳಲ್ಲಿ ಗೇಟ್ನ ಭಾಗಗಳ ತಯಾರಿಕೆ ಅಂತಿಮ ಹಂತ ತಲುಪಿದೆ.</p>.<p>ಇದರ ನಡುವೆ ವಿವಿಧ ಪಕ್ಷಗಳ ನಾಯಕರು ಹಾಗೂ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಪರಿಹಾರಕ್ಕೆ ಆಗ್ರಹ: ಜೆಡಿಎಸ್ ನಾಯಕರು ಕೂಡ ಬುಧವಾರ ಗೇಟ್ ಪರಿಶೀಲನೆ ನಡೆಸಿದರು.</p>.<p>‘ಕೇಂದ್ರ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದನ್ನು ನಿಲ್ಲಿಸಿ ಈ ಕ್ಷಣದಿಂದಲೇ ರೈತರಿಗೆ ಪರಿಹಾರ ವಿತರಣೆ ಹಾಗೂ ಕ್ರಸ್ಟ್ ಗೇಟ್ ದುರಸ್ತಿಯನ್ನು ಕೈಗೊಳ್ಳಬೇಕು’ ಎಂದು ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ. </p>.<p>ಮಾಜಿ ಸಚಿವ ವೆಂಕಟರಾವ್ ನಾಡಗೌಡ್ರು, ಶಾಸಕಿ ಕೆರೆಮ್ಮ ನಾಯಕ್, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್, ಮಾಜಿ ಶಾಸಕ ರಾಜ ವೆಂಕಟಪ್ಪ ನಾಯಕ, ಜೆಡಿಎಸ್ ರಾಜ್ಯ ಯುವ ಘಟಕದ ಕಾರ್ಯಧ್ಯಕ್ಷ ರಾಜು ನಾಯಕ್ ಜಲಾಶಯದಲ್ಲಿ ಪರಿಶೀಲನೆ ನಡೆಸಿದರು.</p>.<p>‘ರಾಜ್ಯ ಸರ್ಕಾರ ಅಣೆಕಟ್ಟು ನಿರ್ವಹಣೆಗಾಗಿನ ಸಭೆಯನ್ನು ಬೆಂಗಳೂರಿನಲ್ಲಿ ಮಾಡಿದ್ದು ನೈತಿಕವಾಗಿ ತಪ್ಪು. ಮಳೆಗಾಲದಲ್ಲಿ ಅಣೆಕಟ್ಟನ್ನು ಸರಿಯಾಗಿ ಪರಿಶೀಲನೆ ಮಾಡದಿರುವುದು ಅಪರಾಧ. ಅಣೆಕಟ್ಟು ನಿರ್ವಹಣೆ ರಾಜ್ಯ ಸರ್ಕಾರದ ಜವಾಬ್ದಾರಿ. ಇದರಲ್ಲಿ ಕೇಂದ್ರ ಸರಕಾರವನ್ನು ದೋಷಿಸಿ ಪ್ರಯೋಜನವಿಲ್ಲ’ ಎಂದು ವೆಂಕಟರಾವ್ ನಾಡಗೌಡ್ರ ಹೇಳಿದರು.</p>.<p>‘ರೈತರಿಗೆ ಪ್ರತಿ ಹೆಕ್ಟೇರ್ಗೆ ₹50 ಸಾವಿರ ಪರಿಹಾರ ನೀಡಬೇಕು’ ಎಂದು ಚಂದ್ರಶೇಖರ್ ಆಗ್ರಹಿಸಿದರು.</p>.<p>ಮುಖಂಡರಾದ ವೀರೇಶಗೌಡ ಚಿಕ್ಕಬಗನಾಳ, ಮೂರ್ತೆಪ್ಪ ಗಿಣಗೇರಿ, ಯಮನಪ್ಪ ಕಟಿಗಿ, ರಮೇಶ ಕುಣಕೇರಿ, ಶ್ರೀನಿವಾಸ ಪೂಜಾರ, ಸಿದ್ದನಗೌಡ ಚಿಕ್ ಬಗನಾಳ, ಶರಣಪ್ಪ ಜಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ತುಂಗಭದ್ರಾ ಜಲಾಶಯದಲ್ಲಿ ಗೇಟ್ ಅಳವಡಿಕೆ ಕಾರ್ಯಕ್ಕೆ ಗೇಟ್ಗಳನ್ನು ತಯಾರಿಸುವ ಕಾರ್ಯ ಚುರುಕಾಗಿ ನಡೆದಿದ್ದು ಎಲ್ಲ ಮೂರು ಕೇಂದ್ರಗಳಲ್ಲಿ ಗೇಟ್ನ ಭಾಗಗಳ ತಯಾರಿಕೆ ಅಂತಿಮ ಹಂತ ತಲುಪಿದೆ.</p>.<p>ಇದರ ನಡುವೆ ವಿವಿಧ ಪಕ್ಷಗಳ ನಾಯಕರು ಹಾಗೂ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಪರಿಹಾರಕ್ಕೆ ಆಗ್ರಹ: ಜೆಡಿಎಸ್ ನಾಯಕರು ಕೂಡ ಬುಧವಾರ ಗೇಟ್ ಪರಿಶೀಲನೆ ನಡೆಸಿದರು.</p>.<p>‘ಕೇಂದ್ರ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದನ್ನು ನಿಲ್ಲಿಸಿ ಈ ಕ್ಷಣದಿಂದಲೇ ರೈತರಿಗೆ ಪರಿಹಾರ ವಿತರಣೆ ಹಾಗೂ ಕ್ರಸ್ಟ್ ಗೇಟ್ ದುರಸ್ತಿಯನ್ನು ಕೈಗೊಳ್ಳಬೇಕು’ ಎಂದು ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ. </p>.<p>ಮಾಜಿ ಸಚಿವ ವೆಂಕಟರಾವ್ ನಾಡಗೌಡ್ರು, ಶಾಸಕಿ ಕೆರೆಮ್ಮ ನಾಯಕ್, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್, ಮಾಜಿ ಶಾಸಕ ರಾಜ ವೆಂಕಟಪ್ಪ ನಾಯಕ, ಜೆಡಿಎಸ್ ರಾಜ್ಯ ಯುವ ಘಟಕದ ಕಾರ್ಯಧ್ಯಕ್ಷ ರಾಜು ನಾಯಕ್ ಜಲಾಶಯದಲ್ಲಿ ಪರಿಶೀಲನೆ ನಡೆಸಿದರು.</p>.<p>‘ರಾಜ್ಯ ಸರ್ಕಾರ ಅಣೆಕಟ್ಟು ನಿರ್ವಹಣೆಗಾಗಿನ ಸಭೆಯನ್ನು ಬೆಂಗಳೂರಿನಲ್ಲಿ ಮಾಡಿದ್ದು ನೈತಿಕವಾಗಿ ತಪ್ಪು. ಮಳೆಗಾಲದಲ್ಲಿ ಅಣೆಕಟ್ಟನ್ನು ಸರಿಯಾಗಿ ಪರಿಶೀಲನೆ ಮಾಡದಿರುವುದು ಅಪರಾಧ. ಅಣೆಕಟ್ಟು ನಿರ್ವಹಣೆ ರಾಜ್ಯ ಸರ್ಕಾರದ ಜವಾಬ್ದಾರಿ. ಇದರಲ್ಲಿ ಕೇಂದ್ರ ಸರಕಾರವನ್ನು ದೋಷಿಸಿ ಪ್ರಯೋಜನವಿಲ್ಲ’ ಎಂದು ವೆಂಕಟರಾವ್ ನಾಡಗೌಡ್ರ ಹೇಳಿದರು.</p>.<p>‘ರೈತರಿಗೆ ಪ್ರತಿ ಹೆಕ್ಟೇರ್ಗೆ ₹50 ಸಾವಿರ ಪರಿಹಾರ ನೀಡಬೇಕು’ ಎಂದು ಚಂದ್ರಶೇಖರ್ ಆಗ್ರಹಿಸಿದರು.</p>.<p>ಮುಖಂಡರಾದ ವೀರೇಶಗೌಡ ಚಿಕ್ಕಬಗನಾಳ, ಮೂರ್ತೆಪ್ಪ ಗಿಣಗೇರಿ, ಯಮನಪ್ಪ ಕಟಿಗಿ, ರಮೇಶ ಕುಣಕೇರಿ, ಶ್ರೀನಿವಾಸ ಪೂಜಾರ, ಸಿದ್ದನಗೌಡ ಚಿಕ್ ಬಗನಾಳ, ಶರಣಪ್ಪ ಜಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>