ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲಿಕಾರ್ಜುನಗೌಡರ ವಜಾಕ್ಕೆ ಆಗ್ರಹ

Last Updated 28 ಜನವರಿ 2022, 12:25 IST
ಅಕ್ಷರ ಗಾತ್ರ

ತಾವರಗೇರಾ: ರಾಯಚೂರಿನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆಯಲು ಪಟ್ಟು ಹಿಡಿದು, ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರ ನಡೆ ಖಂಡಿಸಿ ಪಟ್ಟಣದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಮಲ್ಲಿಕಾರ್ಜುನಗೌಡರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಕಂದಾಯ ಇಲಾಖೆ ಅಧಿಕಾರಿಗೆ ಸಲ್ಲಿಸಿದರು.

ಪ್ರತಿಭಟನೆ ವೇಳೆ ನಾಡ ಕಚೇರಿಯಲ್ಲಿ ಅಧಿಕಾರಿಗಳು ಇರಲಿಲ್ಲ. ಸಂಘಟನೆ ಪದಾಧಿಕಾರಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕಂದಾಯ ನಿರೀಕ್ಷಕ ಶರಣಪ್ಪ ದಾಸರ ಕಚೇರಿಗೆ ಆಗಮಿಸಿ ಮನವಿ ಸ್ವೀಕರಿಸಿದರು.

ಮುಖಂಡರಾದ ನಾಗರಾಜ ನಂದಾಪೂರ, ಸಂಜಿವ ಚಲುವಾದಿ, ಹೇಮರಾಜ, ಯಮನೂರಪ್ಪ, ದುರಗಪ್ಪ ದೇವರಮನಿ, ಗೌತಮ್ ಬಂಡಾರಿ, ಪ್ರಗತಿಪರ ಸಂಘಟನೆಗಳ ರಾಜಾ ನಾಯಕ, ಶ್ಯಾಮೀದಸಾಬ, ಸಿದ್ದಪ್ಪ ಉಪ್ಪಾರ, ಪ.ಪಂ. ಸದಸ್ಯ ಶ್ಯಾಮೂರ್ತಿ, ಪರಿಶಿಷ್ಟ ಮುಖಂಡರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT