<p><strong>ತಾವರಗೇರಾ: </strong>ರಾಯಚೂರಿನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆಯಲು ಪಟ್ಟು ಹಿಡಿದು, ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರ ನಡೆ ಖಂಡಿಸಿ ಪಟ್ಟಣದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.</p>.<p>ಮಲ್ಲಿಕಾರ್ಜುನಗೌಡರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಕಂದಾಯ ಇಲಾಖೆ ಅಧಿಕಾರಿಗೆ ಸಲ್ಲಿಸಿದರು.</p>.<p>ಪ್ರತಿಭಟನೆ ವೇಳೆ ನಾಡ ಕಚೇರಿಯಲ್ಲಿ ಅಧಿಕಾರಿಗಳು ಇರಲಿಲ್ಲ. ಸಂಘಟನೆ ಪದಾಧಿಕಾರಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕಂದಾಯ ನಿರೀಕ್ಷಕ ಶರಣಪ್ಪ ದಾಸರ ಕಚೇರಿಗೆ ಆಗಮಿಸಿ ಮನವಿ ಸ್ವೀಕರಿಸಿದರು.</p>.<p>ಮುಖಂಡರಾದ ನಾಗರಾಜ ನಂದಾಪೂರ, ಸಂಜಿವ ಚಲುವಾದಿ, ಹೇಮರಾಜ, ಯಮನೂರಪ್ಪ, ದುರಗಪ್ಪ ದೇವರಮನಿ, ಗೌತಮ್ ಬಂಡಾರಿ, ಪ್ರಗತಿಪರ ಸಂಘಟನೆಗಳ ರಾಜಾ ನಾಯಕ, ಶ್ಯಾಮೀದಸಾಬ, ಸಿದ್ದಪ್ಪ ಉಪ್ಪಾರ, ಪ.ಪಂ. ಸದಸ್ಯ ಶ್ಯಾಮೂರ್ತಿ, ಪರಿಶಿಷ್ಟ ಮುಖಂಡರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾವರಗೇರಾ: </strong>ರಾಯಚೂರಿನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆಯಲು ಪಟ್ಟು ಹಿಡಿದು, ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರ ನಡೆ ಖಂಡಿಸಿ ಪಟ್ಟಣದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.</p>.<p>ಮಲ್ಲಿಕಾರ್ಜುನಗೌಡರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಕಂದಾಯ ಇಲಾಖೆ ಅಧಿಕಾರಿಗೆ ಸಲ್ಲಿಸಿದರು.</p>.<p>ಪ್ರತಿಭಟನೆ ವೇಳೆ ನಾಡ ಕಚೇರಿಯಲ್ಲಿ ಅಧಿಕಾರಿಗಳು ಇರಲಿಲ್ಲ. ಸಂಘಟನೆ ಪದಾಧಿಕಾರಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕಂದಾಯ ನಿರೀಕ್ಷಕ ಶರಣಪ್ಪ ದಾಸರ ಕಚೇರಿಗೆ ಆಗಮಿಸಿ ಮನವಿ ಸ್ವೀಕರಿಸಿದರು.</p>.<p>ಮುಖಂಡರಾದ ನಾಗರಾಜ ನಂದಾಪೂರ, ಸಂಜಿವ ಚಲುವಾದಿ, ಹೇಮರಾಜ, ಯಮನೂರಪ್ಪ, ದುರಗಪ್ಪ ದೇವರಮನಿ, ಗೌತಮ್ ಬಂಡಾರಿ, ಪ್ರಗತಿಪರ ಸಂಘಟನೆಗಳ ರಾಜಾ ನಾಯಕ, ಶ್ಯಾಮೀದಸಾಬ, ಸಿದ್ದಪ್ಪ ಉಪ್ಪಾರ, ಪ.ಪಂ. ಸದಸ್ಯ ಶ್ಯಾಮೂರ್ತಿ, ಪರಿಶಿಷ್ಟ ಮುಖಂಡರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>