<p><strong>ಕೊಪ್ಪಳ</strong>: ಜಿಲ್ಲೆಯಾದ್ಯಂತ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದ್ದು ಹಬ್ಬದ ಮೊದಲ ದಿನ ಜಿಲ್ಲಾಕೇಂದ್ರದಲ್ಲಿ ದೇವಿ ಮೂರ್ತಿಯ ಪ್ರತಿಷ್ಠಾಪನೆ ನಡೆಯಿತು.</p>.<p>ಅಲಂಕೃತಗೊಂಡ ವಾಹನದಲ್ಲಿ ಬೃಹತ್ ಮೂರ್ತಿಗಳನ್ನು ಮೆರವಣಿಗೆ ಮೂಲಕ ಕರೆ ತರಲಾಯಿತು. ಮೆರವಣಿಗೆಯುದ್ದಕ್ಕೂ ಮಹಿಳೆಯರು ಕುಂಭ ಹೊತ್ತು ಸಾಗಿದರು. ಬಳಿಕ ಪೂಜೆ ನೆರವೇರಿಸುವ ಮೂಲಕ ಮೂರ್ತಿ ಪ್ರತಿಷ್ಠಾಪನೆಯ ಕಾರ್ಯ ನೆರವೇರಿಸಲಾಯಿತು.</p>.<p>ಶರನ್ನವರಾತ್ರಿಯ ಮೊದಲ ದಿನ ಸೂರ್ಯೋದಯಕ್ಕಿಂತಲೂ ಮೊದಲು ಮಹಿಳೆಯರು ತಮ್ಮ ಮನೆ ಸಮೀಪದ ಅಲಂಕೃತ ಬನ್ನಿಗಿಡಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಜಿಲ್ಲಾಕೇಂದ್ರದ ಹಲವು ಸ್ಥಳಗಳಲ್ಲಿ ದೇವಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು ಅಲ್ಲಿಯೂ ವಿಶೇಷ ಪೂಜಾ ಕಾರ್ಯಗಳು ನಡೆದವು.</p>.<p>ನಗರದ ವಾಸವಿ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಮೊದಲ ದಿನ ಅರಿಶಿಣ ಮತ್ತು ಕುಂಕುಮದ ಅಲಂಕಾರ ಮಾಡಲಾಗಿತ್ತು. ಗೋವಿಂದರಾಯನ ಗುಡಿ ಆವರಣದಲ್ಲಿ ದುರ್ಗಾದೇವಿ ಮಿತ್ರ ಮಂಡಳಿಯಿಂದ ಪ್ರತಿಷ್ಠಾಪಿಸಲಾಗುವ ದುರ್ಗಾದೇವಿ ಮೂರ್ತಿ ಮೆರವಣಿಗೆಯಲ್ಲಿ ಕುಂಭ, ಕಳಸದ ಮೆರವಣಿಗೆ ಗಮನ ಸೆಳೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಜಿಲ್ಲೆಯಾದ್ಯಂತ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದ್ದು ಹಬ್ಬದ ಮೊದಲ ದಿನ ಜಿಲ್ಲಾಕೇಂದ್ರದಲ್ಲಿ ದೇವಿ ಮೂರ್ತಿಯ ಪ್ರತಿಷ್ಠಾಪನೆ ನಡೆಯಿತು.</p>.<p>ಅಲಂಕೃತಗೊಂಡ ವಾಹನದಲ್ಲಿ ಬೃಹತ್ ಮೂರ್ತಿಗಳನ್ನು ಮೆರವಣಿಗೆ ಮೂಲಕ ಕರೆ ತರಲಾಯಿತು. ಮೆರವಣಿಗೆಯುದ್ದಕ್ಕೂ ಮಹಿಳೆಯರು ಕುಂಭ ಹೊತ್ತು ಸಾಗಿದರು. ಬಳಿಕ ಪೂಜೆ ನೆರವೇರಿಸುವ ಮೂಲಕ ಮೂರ್ತಿ ಪ್ರತಿಷ್ಠಾಪನೆಯ ಕಾರ್ಯ ನೆರವೇರಿಸಲಾಯಿತು.</p>.<p>ಶರನ್ನವರಾತ್ರಿಯ ಮೊದಲ ದಿನ ಸೂರ್ಯೋದಯಕ್ಕಿಂತಲೂ ಮೊದಲು ಮಹಿಳೆಯರು ತಮ್ಮ ಮನೆ ಸಮೀಪದ ಅಲಂಕೃತ ಬನ್ನಿಗಿಡಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಜಿಲ್ಲಾಕೇಂದ್ರದ ಹಲವು ಸ್ಥಳಗಳಲ್ಲಿ ದೇವಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು ಅಲ್ಲಿಯೂ ವಿಶೇಷ ಪೂಜಾ ಕಾರ್ಯಗಳು ನಡೆದವು.</p>.<p>ನಗರದ ವಾಸವಿ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಮೊದಲ ದಿನ ಅರಿಶಿಣ ಮತ್ತು ಕುಂಕುಮದ ಅಲಂಕಾರ ಮಾಡಲಾಗಿತ್ತು. ಗೋವಿಂದರಾಯನ ಗುಡಿ ಆವರಣದಲ್ಲಿ ದುರ್ಗಾದೇವಿ ಮಿತ್ರ ಮಂಡಳಿಯಿಂದ ಪ್ರತಿಷ್ಠಾಪಿಸಲಾಗುವ ದುರ್ಗಾದೇವಿ ಮೂರ್ತಿ ಮೆರವಣಿಗೆಯಲ್ಲಿ ಕುಂಭ, ಕಳಸದ ಮೆರವಣಿಗೆ ಗಮನ ಸೆಳೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>