<p><strong>ಗಂಗಾವತಿ:</strong> ನಗರದ ಸಿದ್ದಿಕೇರಿ ರಸ್ತೆಯಲ್ಲಿನ ಶಂಕರ ಮಠದಲ್ಲಿ ತ್ರಿಮೂರ್ತಿ ಅವತಾರಿ ದತ್ತಾತ್ರೇಯ ಗುರುಗಳ ಜಯಂತ್ಯುತ್ಸವ ಸೋಮವಾರ ಆಚರಿಸಲಾಯಿತು.</p>.<p>ಜಯಂತಿ ನಿಮಿತ್ತ ದೇವಸ್ಥಾನದಲ್ಲಿ ದತ್ತಾತ್ರೇಯ ಪಾದುಕೆಗಳಿಗೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ ಪಾರಾಯಣ, ವಿಶೇಷ ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ನಾನಾ ಧಾರ್ಮಿಕ ಪೂಜೆಗಳನ್ನು ನಡೆಸಲಾಯಿತು. ನಂತರ ತೊಟ್ಟಿಲು ಸೇವೆ ಜೊತೆಗೆ ಪಲ್ಲಕ್ಕಿ ಮೆರವಣಿಗೆ ನಡೆಸಲಾಯಿತು.</p>.<p>ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ, ‘ಪ್ರತಿ ವರ್ಷದಂತೆ ಈ ಬಾರಿಯೂ ದತ್ತಾತ್ರೇಯ ಜಯಂತಿ ಆಚರಣೆ ಮಾಡಲಾಗುತ್ತಿದೆ. ಇದು 15ನೇ ವರ್ಷದ ಜಯಂತಿಯಾಗಿದೆ’ ಎಂದು ತಿಳಿಸಿದರು. </p>.<p>ದೇವಸ್ಥಾನ ಪ್ರಧಾನ ಅರ್ಚಕ ಕುಮಾರ್ ಭಟ್, ಪ್ರಮುಖರಾದ ಮಹೇಶ ಭಟ್ ಜೋಷಿ, ರಾಘವೇಂದ್ರ ಅಳವಂಡಿಕರ್, ಬಾಲಕೃಷ್ಣ ದೇಸಾಯಿ, ಶ್ರೀಪಾದರಾವ್ ಮುಧೋಳಕರ್, ದತ್ತಾತ್ರೇಯ ಹೊಸಳ್ಳಿ, ವಿಶ್ವನಾಥ ಅಳವಂಡಿಕರ್, ಸುಧಾಕರ್ ಶೋಷಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ನಗರದ ಸಿದ್ದಿಕೇರಿ ರಸ್ತೆಯಲ್ಲಿನ ಶಂಕರ ಮಠದಲ್ಲಿ ತ್ರಿಮೂರ್ತಿ ಅವತಾರಿ ದತ್ತಾತ್ರೇಯ ಗುರುಗಳ ಜಯಂತ್ಯುತ್ಸವ ಸೋಮವಾರ ಆಚರಿಸಲಾಯಿತು.</p>.<p>ಜಯಂತಿ ನಿಮಿತ್ತ ದೇವಸ್ಥಾನದಲ್ಲಿ ದತ್ತಾತ್ರೇಯ ಪಾದುಕೆಗಳಿಗೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ ಪಾರಾಯಣ, ವಿಶೇಷ ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ನಾನಾ ಧಾರ್ಮಿಕ ಪೂಜೆಗಳನ್ನು ನಡೆಸಲಾಯಿತು. ನಂತರ ತೊಟ್ಟಿಲು ಸೇವೆ ಜೊತೆಗೆ ಪಲ್ಲಕ್ಕಿ ಮೆರವಣಿಗೆ ನಡೆಸಲಾಯಿತು.</p>.<p>ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಮಾತನಾಡಿ, ‘ಪ್ರತಿ ವರ್ಷದಂತೆ ಈ ಬಾರಿಯೂ ದತ್ತಾತ್ರೇಯ ಜಯಂತಿ ಆಚರಣೆ ಮಾಡಲಾಗುತ್ತಿದೆ. ಇದು 15ನೇ ವರ್ಷದ ಜಯಂತಿಯಾಗಿದೆ’ ಎಂದು ತಿಳಿಸಿದರು. </p>.<p>ದೇವಸ್ಥಾನ ಪ್ರಧಾನ ಅರ್ಚಕ ಕುಮಾರ್ ಭಟ್, ಪ್ರಮುಖರಾದ ಮಹೇಶ ಭಟ್ ಜೋಷಿ, ರಾಘವೇಂದ್ರ ಅಳವಂಡಿಕರ್, ಬಾಲಕೃಷ್ಣ ದೇಸಾಯಿ, ಶ್ರೀಪಾದರಾವ್ ಮುಧೋಳಕರ್, ದತ್ತಾತ್ರೇಯ ಹೊಸಳ್ಳಿ, ವಿಶ್ವನಾಥ ಅಳವಂಡಿಕರ್, ಸುಧಾಕರ್ ಶೋಷಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>