<p><strong>ಕೊಪ್ಪಳ:</strong> ‘ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ನಿಜವಾದ ವಾರಸುದಾರರಿಗೆ ಪರಿಹಾರ ನೀಡಬೇಕು’ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಹಶೀಲ್ದಾರ್ಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ವಾರಸುದಾರರಿಗೆ ಪರಿಹಾರ ವಿತರಿಸುವ ಕುರಿತು ತಹಶೀಲ್ದಾರ್ ಹಾಗೂ ಉಪತಹಶೀಲ್ದಾರ್ಗಳೊಂದಿಗೆ ನಡೆಸಿದ ವಿಡಿಯೊ ಸಂವಾದದಲ್ಲಿ ಮಾತನಾಡಿದರು.</p>.<p>ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬದವರು ದುಃಖದಲ್ಲಿರುತ್ತಾರೆ. ದಾಖಲಾತಿ ನೆಪದಲ್ಲಿ ವಿಳಂಬ ಮಾಡಬೇಡಿ. ಬದಲಿಗೆ ಅಗತ್ಯ ದಾಖಲೆಗಳನ್ನು ಪಡೆದು, ತ್ವರಿತವಾಗಿ ಪರಿಹಾರ ಒದಗಿಸಬೇಕು. ಮೃತರ ಕುಟುಂಬದವರ ಮನೆಗೆ ತೆರಳಿ, ಎಲ್ಲ ತಹಶೀಲ್ದಾರರು ತಮ್ಮ ತಾಲ್ಲೂಕಿನ ದಾಖಲೆಗಳನ್ನು ಪಡೆದು, ನಮ್ಮ ಕಚೇರಿಗೆ ಸಲ್ಲಿಸಬೇಕು. ಒಂದು ವಾರದಲ್ಲಿ ಈ ಕೆಲಸವನ್ನು ಪೂರ್ಣಗೊಳಿಸಬೇಕು ಮತ್ತು ಅವರಿಗೆ ಆದಷ್ಟು ಬೇಗ ಪರಿಹಾರ ಒದಗಿಸಬೇಕು ಎಂದು ಅವರು ಸೂಚನೆ ಈ ವೇಳೆ ನೀಡಿದರು.</p>.<p class="Subhead">ಪರಿಹಾರ ಪಾವತಿ ವಿಧಾನ: ಕೇಂದ್ರ ಸರ್ಕಾರದಿಂದ ಸಂಧ್ಯಾ ಸುರಕ್ಷಾ ಯೋಜನೆಯಡಿ ₹1 ಲಕ್ಷ ನೇರ ನಗದು ವರ್ಗಾವಣೆ (ಡಿಬಿಟಿ) ವ್ಯವಸ್ಥೆ ಮೂಲಕ ಪಾವತಿಸುವುದು. ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ಪ್ರತಿಯೊಬ್ಬ ಮೃತರ ವಾರಸುದಾರರಿಗೆ ತಲಾ ₹50 ಸಾವಿರ ಪರಿಹಾರವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ಪಾವತಿಸಲಾಗುವುದು ಎಂದು ಅವರು ಹೇಳಿದರು.</p>.<p>ಕೋವಿಡ್ನಿಂದ ಬಿಪಿಎಲ್ ಕುಟುಂಬದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಲ್ಲಿ ಅಂಥ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ₹1 ಲಕ್ಷ ಮತ್ತು ಎಸ್ಡಿಆರ್ಎಫ್ ಅಡಿ ₹50 ಸಾವಿರ ಸೇರಿದಂತೆ ಒಟ್ಟು ₹1.50 ಲಕ್ಷ ಪಾವತಿಸಲಾಗುತ್ತದೆ. ಅಲ್ಲದೆ, ಕೋವಿಡ್ನಿಂದ ಬಿಪಿಎಲ್ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮರಣ ಸಂಭವಿಸಿದ್ದಲ್ಲಿ ಅಂಥ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ₹1 ಲಕ್ಷ ಮತ್ತು ಎಸ್ಡಿಆರ್ಎಫ್ ಅಡಿ ಮೃತರ ಸಂಖ್ಯೆಗೆ ಅನುಗುಣವಾಗಿ ತಲಾ ₹50 ಸಾವಿರ ಪಾವತಿಸಲಾಗುತ್ತದೆ ಎಂದು ಹೇಳಿದರು.</p>.<p>ಬಿಪಿಎಲ್ ಹೊರತುಪಡಿಸಿದ ಕುಟುಂಬದಲ್ಲಿ ಒಂದು ಅಥವಾ ಒಂದಕ್ಕಿಂತ ಹೆಚ್ಚು ಮರಣ ಸಂಭವಿಸಿದ್ದಲ್ಲಿ ಅಂಥ ಕುಟುಂಬಕ್ಕೆ ಎಸ್ಡಿಆರ್ಎಫ್ ಅಡಿ ಮೃತ ಸಂಖ್ಯೆಗೆ ಅನುಗುಣವಾಗಿ ತಲಾ ₹50 ಸಾವಿರ ಪಾವತಿಸಬೇಕು ಎಂದು ಜಿಲ್ಲಾಧಿಕಾರಿಗಳು ತಹಶೀಲ್ದಾರರಿಗೆ ವಿವರಿಸಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಇ-ಜನ್ಮ ತಂತ್ರಾಂಶ ಮತ್ತು ಪರಿಹಾರ ಪೋರ್ಟಲ್ಗಳ ಕುರಿತು ಮಾಹಿತಿ ನೀಡಿದರು.</p>.<p>ಹೆಚ್ಚುವರಿಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ಹೇಮಂತ್ಕುಮಾರ್.ಎನ್, ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ ಅವರು ಈ ವೇಳೆ ಸಭೆಯಲ್ಲಿಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ‘ಕೋವಿಡ್ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ನಿಜವಾದ ವಾರಸುದಾರರಿಗೆ ಪರಿಹಾರ ನೀಡಬೇಕು’ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಹಶೀಲ್ದಾರ್ಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ವಾರಸುದಾರರಿಗೆ ಪರಿಹಾರ ವಿತರಿಸುವ ಕುರಿತು ತಹಶೀಲ್ದಾರ್ ಹಾಗೂ ಉಪತಹಶೀಲ್ದಾರ್ಗಳೊಂದಿಗೆ ನಡೆಸಿದ ವಿಡಿಯೊ ಸಂವಾದದಲ್ಲಿ ಮಾತನಾಡಿದರು.</p>.<p>ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬದವರು ದುಃಖದಲ್ಲಿರುತ್ತಾರೆ. ದಾಖಲಾತಿ ನೆಪದಲ್ಲಿ ವಿಳಂಬ ಮಾಡಬೇಡಿ. ಬದಲಿಗೆ ಅಗತ್ಯ ದಾಖಲೆಗಳನ್ನು ಪಡೆದು, ತ್ವರಿತವಾಗಿ ಪರಿಹಾರ ಒದಗಿಸಬೇಕು. ಮೃತರ ಕುಟುಂಬದವರ ಮನೆಗೆ ತೆರಳಿ, ಎಲ್ಲ ತಹಶೀಲ್ದಾರರು ತಮ್ಮ ತಾಲ್ಲೂಕಿನ ದಾಖಲೆಗಳನ್ನು ಪಡೆದು, ನಮ್ಮ ಕಚೇರಿಗೆ ಸಲ್ಲಿಸಬೇಕು. ಒಂದು ವಾರದಲ್ಲಿ ಈ ಕೆಲಸವನ್ನು ಪೂರ್ಣಗೊಳಿಸಬೇಕು ಮತ್ತು ಅವರಿಗೆ ಆದಷ್ಟು ಬೇಗ ಪರಿಹಾರ ಒದಗಿಸಬೇಕು ಎಂದು ಅವರು ಸೂಚನೆ ಈ ವೇಳೆ ನೀಡಿದರು.</p>.<p class="Subhead">ಪರಿಹಾರ ಪಾವತಿ ವಿಧಾನ: ಕೇಂದ್ರ ಸರ್ಕಾರದಿಂದ ಸಂಧ್ಯಾ ಸುರಕ್ಷಾ ಯೋಜನೆಯಡಿ ₹1 ಲಕ್ಷ ನೇರ ನಗದು ವರ್ಗಾವಣೆ (ಡಿಬಿಟಿ) ವ್ಯವಸ್ಥೆ ಮೂಲಕ ಪಾವತಿಸುವುದು. ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ಪ್ರತಿಯೊಬ್ಬ ಮೃತರ ವಾರಸುದಾರರಿಗೆ ತಲಾ ₹50 ಸಾವಿರ ಪರಿಹಾರವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ಪಾವತಿಸಲಾಗುವುದು ಎಂದು ಅವರು ಹೇಳಿದರು.</p>.<p>ಕೋವಿಡ್ನಿಂದ ಬಿಪಿಎಲ್ ಕುಟುಂಬದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಲ್ಲಿ ಅಂಥ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ₹1 ಲಕ್ಷ ಮತ್ತು ಎಸ್ಡಿಆರ್ಎಫ್ ಅಡಿ ₹50 ಸಾವಿರ ಸೇರಿದಂತೆ ಒಟ್ಟು ₹1.50 ಲಕ್ಷ ಪಾವತಿಸಲಾಗುತ್ತದೆ. ಅಲ್ಲದೆ, ಕೋವಿಡ್ನಿಂದ ಬಿಪಿಎಲ್ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮರಣ ಸಂಭವಿಸಿದ್ದಲ್ಲಿ ಅಂಥ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ₹1 ಲಕ್ಷ ಮತ್ತು ಎಸ್ಡಿಆರ್ಎಫ್ ಅಡಿ ಮೃತರ ಸಂಖ್ಯೆಗೆ ಅನುಗುಣವಾಗಿ ತಲಾ ₹50 ಸಾವಿರ ಪಾವತಿಸಲಾಗುತ್ತದೆ ಎಂದು ಹೇಳಿದರು.</p>.<p>ಬಿಪಿಎಲ್ ಹೊರತುಪಡಿಸಿದ ಕುಟುಂಬದಲ್ಲಿ ಒಂದು ಅಥವಾ ಒಂದಕ್ಕಿಂತ ಹೆಚ್ಚು ಮರಣ ಸಂಭವಿಸಿದ್ದಲ್ಲಿ ಅಂಥ ಕುಟುಂಬಕ್ಕೆ ಎಸ್ಡಿಆರ್ಎಫ್ ಅಡಿ ಮೃತ ಸಂಖ್ಯೆಗೆ ಅನುಗುಣವಾಗಿ ತಲಾ ₹50 ಸಾವಿರ ಪಾವತಿಸಬೇಕು ಎಂದು ಜಿಲ್ಲಾಧಿಕಾರಿಗಳು ತಹಶೀಲ್ದಾರರಿಗೆ ವಿವರಿಸಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಇ-ಜನ್ಮ ತಂತ್ರಾಂಶ ಮತ್ತು ಪರಿಹಾರ ಪೋರ್ಟಲ್ಗಳ ಕುರಿತು ಮಾಹಿತಿ ನೀಡಿದರು.</p>.<p>ಹೆಚ್ಚುವರಿಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ಹೇಮಂತ್ಕುಮಾರ್.ಎನ್, ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ ಅವರು ಈ ವೇಳೆ ಸಭೆಯಲ್ಲಿಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>