ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬದವರು ದುಃಖದಲ್ಲಿರುತ್ತಾರೆ. ದಾಖಲಾತಿ ನೆಪದಲ್ಲಿ ವಿಳಂಬ ಮಾಡಬೇಡಿ. ಬದಲಿಗೆ ಅಗತ್ಯ ದಾಖಲೆಗಳನ್ನು ಪಡೆದು, ತ್ವರಿತವಾಗಿ ಪರಿಹಾರ ಒದಗಿಸಬೇಕು. ಮೃತರ ಕುಟುಂಬದವರ ಮನೆಗೆ ತೆರಳಿ, ಎಲ್ಲ ತಹಶೀಲ್ದಾರರು ತಮ್ಮ ತಾಲ್ಲೂಕಿನ ದಾಖಲೆಗಳನ್ನು ಪಡೆದು, ನಮ್ಮ ಕಚೇರಿಗೆ ಸಲ್ಲಿಸಬೇಕು. ಒಂದು ವಾರದಲ್ಲಿ ಈ ಕೆಲಸವನ್ನು ಪೂರ್ಣಗೊಳಿಸಬೇಕು ಮತ್ತು ಅವರಿಗೆ ಆದಷ್ಟು ಬೇಗ ಪರಿಹಾರ ಒದಗಿಸಬೇಕು ಎಂದು ಅವರು ಸೂಚನೆ ಈ ವೇಳೆ ನೀಡಿದರು.