<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ತಾಲ್ಲೂಕಿನ ಸಾಣಾಪುರ ಗ್ರಾಮದ ಬಳಿ ತುಂಗಾಭದ್ರಾ ನದಿಯಲ್ಲಿ ಈಜಲು ಹಾರಿ ಮುಳುಗಿ ಮೃತಪಟ್ಟ ಹೈದರಾಬಾದ್ನ ಖಾಸಗಿ ಆಸ್ಪತ್ರೆಯ ವೈದ್ಯೆ ಅನನ್ಯರಾವ್ (26) ಮೃತದೇಹ ಗುರುವಾರ ಪತ್ತೆಯಾಗಿದೆ. </p><p>ಅಗ್ನಿಶಾಮಕ, ಪೊಲೀಸ್ ಇಲಾಖೆ, ಜೆಎಸ್ಡಬ್ಲ್ಯು ಸುರಕ್ಷಿತ ತಂಡ ಹಾಗೂ ಸ್ಥಳೀಯವಾಗಿ ತೆಪ್ಪ ಹಾಕುವ ಯುವಕರ ನಿರಂತರ ಕಾರ್ಯಾಚರಣೆಯಿಂದ ಘಟನೆ ನಡೆದ ಒಂದು ದಿನದ ಬಳಿಕ ಮೃತದೇಹ ಸಿಕ್ಕಿದೆ.</p><p>ಹೈದರಾಬಾದ್ ಸಮೀಪದ ನಾಂಪಲ್ಲಿಯ ಅನನ್ಯರಾವ್ ರಜೆಯ ದಿನಗಳನ್ನು ಕಳೆಯಲು ಸ್ನೇಹಿತರ ಜೊತೆ ಇಲ್ಲಿಗೆ ಬಂದು ಸಾಣಾಪುರ ಗ್ರಾಮದ ಗೆಸ್ಟ್ ಹೌಸ್ನಲ್ಲಿ ತಂಗಿದ್ದರು. ಬುಧವಾರ ಬೆಳಿಗ್ಗೆ ಗೆಸ್ಟ್ ಹೌಸ್ ಹಿಂಭಾಗದಲ್ಲಿರುವ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋದಾಗ ಈ ಅವಘಡ ನಡೆದಿತ್ತು. ಅನನ್ಯರಾವ್ ತೆಲಂಗಾಣದ ರಾಜಕೀಯ ನಾಯಕರೊಬ್ಬರ ಪುತ್ರಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.</p>.<p>ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಕಡಿಮೆ ಮಾಡಿಸಿ ಕಾರ್ಯಾಚರಣೆ ನಡೆಸಿದ್ದರಿಂದ ಮೃತದೇಹ ಕೊರಕಲು ಕಲ್ಲುಬಂಡೆಗಳ ನಡುವೆ ಪತ್ತೆಯಾಗಿದೆ. ಸ್ಥಳೀಯರ ನೆರವಿನಿಂದ ಮೃತದೇಹ ಹೈದರಾಬಾದ್ಗೆ ತೆಗೆದುಕೊಂಡು ಹೋಗಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ತಾಲ್ಲೂಕಿನ ಸಾಣಾಪುರ ಗ್ರಾಮದ ಬಳಿ ತುಂಗಾಭದ್ರಾ ನದಿಯಲ್ಲಿ ಈಜಲು ಹಾರಿ ಮುಳುಗಿ ಮೃತಪಟ್ಟ ಹೈದರಾಬಾದ್ನ ಖಾಸಗಿ ಆಸ್ಪತ್ರೆಯ ವೈದ್ಯೆ ಅನನ್ಯರಾವ್ (26) ಮೃತದೇಹ ಗುರುವಾರ ಪತ್ತೆಯಾಗಿದೆ. </p><p>ಅಗ್ನಿಶಾಮಕ, ಪೊಲೀಸ್ ಇಲಾಖೆ, ಜೆಎಸ್ಡಬ್ಲ್ಯು ಸುರಕ್ಷಿತ ತಂಡ ಹಾಗೂ ಸ್ಥಳೀಯವಾಗಿ ತೆಪ್ಪ ಹಾಕುವ ಯುವಕರ ನಿರಂತರ ಕಾರ್ಯಾಚರಣೆಯಿಂದ ಘಟನೆ ನಡೆದ ಒಂದು ದಿನದ ಬಳಿಕ ಮೃತದೇಹ ಸಿಕ್ಕಿದೆ.</p><p>ಹೈದರಾಬಾದ್ ಸಮೀಪದ ನಾಂಪಲ್ಲಿಯ ಅನನ್ಯರಾವ್ ರಜೆಯ ದಿನಗಳನ್ನು ಕಳೆಯಲು ಸ್ನೇಹಿತರ ಜೊತೆ ಇಲ್ಲಿಗೆ ಬಂದು ಸಾಣಾಪುರ ಗ್ರಾಮದ ಗೆಸ್ಟ್ ಹೌಸ್ನಲ್ಲಿ ತಂಗಿದ್ದರು. ಬುಧವಾರ ಬೆಳಿಗ್ಗೆ ಗೆಸ್ಟ್ ಹೌಸ್ ಹಿಂಭಾಗದಲ್ಲಿರುವ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋದಾಗ ಈ ಅವಘಡ ನಡೆದಿತ್ತು. ಅನನ್ಯರಾವ್ ತೆಲಂಗಾಣದ ರಾಜಕೀಯ ನಾಯಕರೊಬ್ಬರ ಪುತ್ರಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.</p>.<p>ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಕಡಿಮೆ ಮಾಡಿಸಿ ಕಾರ್ಯಾಚರಣೆ ನಡೆಸಿದ್ದರಿಂದ ಮೃತದೇಹ ಕೊರಕಲು ಕಲ್ಲುಬಂಡೆಗಳ ನಡುವೆ ಪತ್ತೆಯಾಗಿದೆ. ಸ್ಥಳೀಯರ ನೆರವಿನಿಂದ ಮೃತದೇಹ ಹೈದರಾಬಾದ್ಗೆ ತೆಗೆದುಕೊಂಡು ಹೋಗಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>