<p><strong>ಕೊಪ್ಪಳ</strong>: ‘ವಿದ್ಯೆ ಪಡೆಯಲಾಗದಿದ್ದರೂ ಮಹಾಭಾರತ ಹಾಗೂ ರಾಮಾಯಣವನ್ನು ನಿರರ್ಗಳವಾಗಿ ಕಥೆ ಮೂಲಕ ಹೇಳುತ್ತ ತೊಗಲುಗೊಂಬೆ ಆಟ ಆಡಿಸುವ ಕಲಾವಿದೆ ಭೀಮವ್ವ ಅವರು ಕಲೆಗೆ ಬದುಕನ್ನು ಅರ್ಪಿಸಿಕೊಂಡವರು. ಅವರ ಪಾಲಿಗೆ ಕಲೆಯೇ ದೇವರು’ ಎಂದು ಅಂಚೆ ನಿರೀಕ್ಷಕ ಮಹಾಂತೇಶ ತೊಗರಿ ಹೇಳಿದರು.</p>.<p>ಸೋಮವಾರ ಕೊಪ್ಪಳದ ಪ್ರಧಾನ ಅಂಚೆ ಕಚೇರಿಯಲ್ಲಿ ಜರುಗಿದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಭೀಮವ್ವ ಶಿಳ್ಳಿಕ್ಯಾತರ ಅವರ ಅಂಚೆ ಚೀಟಿ ಸಮರ್ಪಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ ‘ಸುದೀರ್ಘ ಬದುಕಿನ ಪಯಣದಲ್ಲಿ ವಿದೇಶಗಳಲ್ಲಿ ಕಲೆ ಪ್ರದರ್ಶಿಸಿದ್ದಾರೆ’ ಎಂದರು.</p>.<p>ಭೀಮವ್ವ ಅವರ ಅಂಚೆ ಚೀಟಿ ಪ್ರಾಯೋಜಿಸಿದ್ದ ಸಾಹಿತಿ ಸಾವಿತ್ರಿ ಮುಜುಮದಾರ ಮಾತನಾಡಿ ‘ಬಸ್ಗಳ ಸೌಕರ್ಯಗಳೇ ಇಲ್ಲದ ಕಾಲದಲ್ಲಿ ಗ್ರಾಮಗಳಿಗೆ ನಡೆದುಕೊಂಡು ಹೋಗಿ ಬದುಕಿನ ಅತ್ಯಂತ ಕಷ್ಟದ ಕಾಲದಲ್ಲಿಯೂ ತೊಗಲುಗೊಂಬೆ ಆಟದ ಪ್ರದರ್ಶನ ಮಾಡಿ ಕಲಾನಿಷ್ಠೆ ತೋರಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕೊಪ್ಪಳದ ಅಂಚೆ ವಿಭಾಗೀಯ ಅಧೀಕ್ಷಕ ಎನ್.ಜಿ. ಬಂಗಿಗೌಡರ, ಪ್ರಧಾನ ಅಂಚೆ ಕಚೇರಿ ಪಾಲಕ ಬಿ. ನಾಗರಾಜ, ತೇಜಸ್ವಿನಿ, ಜಿ.ಎನ್. ಹಳ್ಳಿ, ಸಕ್ರಪ್ಪ ಹೂಗಾರ, ರವಿ ಕಾಂತನವರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ವಿದ್ಯೆ ಪಡೆಯಲಾಗದಿದ್ದರೂ ಮಹಾಭಾರತ ಹಾಗೂ ರಾಮಾಯಣವನ್ನು ನಿರರ್ಗಳವಾಗಿ ಕಥೆ ಮೂಲಕ ಹೇಳುತ್ತ ತೊಗಲುಗೊಂಬೆ ಆಟ ಆಡಿಸುವ ಕಲಾವಿದೆ ಭೀಮವ್ವ ಅವರು ಕಲೆಗೆ ಬದುಕನ್ನು ಅರ್ಪಿಸಿಕೊಂಡವರು. ಅವರ ಪಾಲಿಗೆ ಕಲೆಯೇ ದೇವರು’ ಎಂದು ಅಂಚೆ ನಿರೀಕ್ಷಕ ಮಹಾಂತೇಶ ತೊಗರಿ ಹೇಳಿದರು.</p>.<p>ಸೋಮವಾರ ಕೊಪ್ಪಳದ ಪ್ರಧಾನ ಅಂಚೆ ಕಚೇರಿಯಲ್ಲಿ ಜರುಗಿದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಭೀಮವ್ವ ಶಿಳ್ಳಿಕ್ಯಾತರ ಅವರ ಅಂಚೆ ಚೀಟಿ ಸಮರ್ಪಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ ‘ಸುದೀರ್ಘ ಬದುಕಿನ ಪಯಣದಲ್ಲಿ ವಿದೇಶಗಳಲ್ಲಿ ಕಲೆ ಪ್ರದರ್ಶಿಸಿದ್ದಾರೆ’ ಎಂದರು.</p>.<p>ಭೀಮವ್ವ ಅವರ ಅಂಚೆ ಚೀಟಿ ಪ್ರಾಯೋಜಿಸಿದ್ದ ಸಾಹಿತಿ ಸಾವಿತ್ರಿ ಮುಜುಮದಾರ ಮಾತನಾಡಿ ‘ಬಸ್ಗಳ ಸೌಕರ್ಯಗಳೇ ಇಲ್ಲದ ಕಾಲದಲ್ಲಿ ಗ್ರಾಮಗಳಿಗೆ ನಡೆದುಕೊಂಡು ಹೋಗಿ ಬದುಕಿನ ಅತ್ಯಂತ ಕಷ್ಟದ ಕಾಲದಲ್ಲಿಯೂ ತೊಗಲುಗೊಂಬೆ ಆಟದ ಪ್ರದರ್ಶನ ಮಾಡಿ ಕಲಾನಿಷ್ಠೆ ತೋರಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕೊಪ್ಪಳದ ಅಂಚೆ ವಿಭಾಗೀಯ ಅಧೀಕ್ಷಕ ಎನ್.ಜಿ. ಬಂಗಿಗೌಡರ, ಪ್ರಧಾನ ಅಂಚೆ ಕಚೇರಿ ಪಾಲಕ ಬಿ. ನಾಗರಾಜ, ತೇಜಸ್ವಿನಿ, ಜಿ.ಎನ್. ಹಳ್ಳಿ, ಸಕ್ರಪ್ಪ ಹೂಗಾರ, ರವಿ ಕಾಂತನವರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>