ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 7.5 ಮೀಸಲಾತಿ ಹೆಚ್ಚಳಕ್ಕೆ ಆಗ್ರಹ

ವಾಲ್ಮೀಕಿ ಮಹಾಸಭಾದ ಪ್ರಮುಖರಿಂದ ಪ್ರತಿಭಟನೆ
Last Updated 17 ಸೆಪ್ಟೆಂಬರ್ 2020, 8:53 IST
ಅಕ್ಷರ ಗಾತ್ರ

ಕುಷ್ಟಗಿ: ವಾಲ್ಮೀಕಿ ನಾಯಕ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 7.5ರಷ್ಟು ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ವಾಲ್ಮೀಕಿ ನಾಯಕ ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ.

ಮೀಸಲಾತಿ ಮತ್ತು ಇತರೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದಲ್ಲಿ ಬುಧವಾರ ತಾಲ್ಲೂಕು ಘಟಕದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಅಧ್ಯಕ್ಷ ಬಸವರಾಜ ನಾಯಕ ಅವರು, ವಾಲ್ಮೀಕಿ ಸಮುದಾಯ ರಾಜ್ಯದಲ್ಲಿ ಸುಮಾರು 75 ಲಕ್ಷ ಜನಸಂಖ್ಯೆ ಹೊಂದಿದೆ. ಸಮುದಾಯದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡುವ ಮೀಸಲಾತಿಯಲ್ಲಿ ನ್ಯಾಯಯುತ ಪಾಲು ದೊರೆತಿಲ್ಲ ಎಂದು ಹೇಳಿದರು.

ಈ ವಿಷಯದಲ್ಲಿ ಸಮುದಾಯ ಜನರು ಅನೇಕ ವರ್ಷಗಳಿಂದಲೂ ಹೋರಾಟ ನಡೆಸುವ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಬಂದಿದ್ದಾರೆ. ರಾಜನಹಳ್ಳಿಯಿಂದ ಬೆಂಗಳೂರಿನ ತನಕ ಪಾದಯಾತ್ರೆ ನಡೆಸಲಾಯಿತು. ಇಷ್ಟಾದರೂ ಸರ್ಕಾರ ಸಮುದಾಯದ ಬೇಡಿಕೆಯನ್ನು ಸಹಾನುಭೂತಿಯಿಂದ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ದೂರಿದರು.

ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಹೋರಾಟದ ಸ್ವರೂಪವೇ ಬದಲಾಗುತ್ತದೆ. ಅದಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಕಲಿ ಜಾತಿ ಪ್ರಮಾಣಪತ್ರ ಪಡೆದವರ ಮತ್ತು ನೀಡಿದವರ ವಿರುದ್ಧ ಕ್ರಮ ಜರುಗಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮವನ್ನಾಗಿ ಪ್ರತ್ಯೇಕಿಸಬೇಕು. ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ವಾಲ್ಮೀಕಿ ಸಚಿವಾಲಯ ಸ್ಥಾಪಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಕ್ಷಣ ಮುಂದಾಗಬೇಕು ಎಂದು ಒತ್ತಾಯಿಸಿದರು.

ಗ್ರೇಡ್‌ 2 ತಹಶೀಲ್ದಾರ್ ವಿಜಯಾ ಮನವಿ ಸ್ವೀಕರಿಸಿದರು.

ಪ್ರಮುಖರಾದ ಹ.ಯ.ಈಟಿಯವರ, ಅಡಿವೆಪ್ಪ ನೆರೆಬೆಂಚಿ, ಚಂದ್ರಹಾಸ ಭಾವಿಕಟ್ಟಿ, ಬಾಲಪ್ಪ ಚಾಕರಿ, ರಮೇಶ ಕೊಳ್ಳಿ, ಕಳಕಪ್ಪ ಉಂಡಿ, ಮಾನಪ್ಪ ತಳವಾರ, ಪರಸಪ್ಪ ನಂದಿಹಾಳ, ಶಿವನಗೌಡ ಮದಲಗಟ್ಟಿ, ಈರಪ್ಪ ನಾಯಕ, ತಾಲ್ಲೂಕು ಪಂಚಾಯಿತಿ ಸದಸ್ಯ ಭೀಮಣ್ಣ ತಲೆಖಾನ, ಭೀಮನಗೌಡ ನಂದಿಹಾಳ, ದೊಡ್ಡಪ್ಪ ಗೋನಾಳ, ಹನುಮಂತ ನಾಯಕ, ನಾಗರಾಜ ಹಜಾಳ,ವೆಂಕಟೇಶ ತಾವರಗೇರಿ, ಶರಣಪ್ಪ ಲೈನದ ಹಾಗೂ ಸಮುದಾಯದ ಜನರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT