<p><strong>ಕೊಪ್ಪಳ:</strong> ತಾಲ್ಲೂಕಿನ ಮುದ್ದಾಬಳ್ಳಿಯಲ್ಲಿ ದಲಿತರು ಕ್ಷೌರ ಮಾಡುವಂತೆ ಕೇಳಿದ್ದರಿಂದ ಅಂಗಡಿ ಬಂದ್ ಮಾಡಿದ್ದ ಪ್ರಕರಣದ ಸಂಬಂಧ ಬುಧವಾರ ಸಭೆ ನಡೆದಿದ್ದು, ಇಂಥ ಘಟನೆ ಮರುಕಳಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. </p>.<p>‘ಪ್ರಜಾವಾಣಿ’ಯ ಬುಧವಾರದ ಸಂಚಿಕೆಯಲ್ಲಿ ‘ದಲಿತರು ಕ್ಷೌರ ಕೇಳಿದ್ದಕ್ಕೆ ಅಂಗಡಿಯೇ ಬಂದ್’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.</p>.<p>ವರದಿ ಆಧರಿಸಿ ಸಭೆ ನಡೆಸಿರುವ ಅಧಿಕಾರಿಗಳು, ‘ದೇವಾಲಯ, ಹೋಟೆಲ್ ಹಾಗೂ ಕ್ಷೌರದ ಅಂಗಡಿಗಳಲ್ಲಿ ಎಲ್ಲರಿಗೂ ಮುಕ್ತ ಅವಕಾಶವಿರಬೇಕು. ದಲಿತರು ಎಂದು ನಿರಾಕರಿಸಿದರೆ ಕ್ರಮ ಜರುಗಿಸಲಾಗುವುದು’ ಎಂದು ಮುದ್ದಾಬಳ್ಳಿಯ ಕ್ಷೌರಿಕರಿಗೆ ಎಚ್ಚರಿಕೆ ನೀಡಿದರು.</p>.<p>ಬಳಿಕ ಗ್ರಾಮಸ್ಥರ ಸಮ್ಮುಖದಲ್ಲಿಯೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ದಲಿತ ವ್ಯಕ್ತಿಯೊಬ್ಬರಿಗೆ ಅದೇ ಗ್ರಾಮದ ಕ್ಷೌರಿಕರಿಂದ ಕ್ಷೌರ ಮಾಡಿಸಿದರು.</p>.<p>‘ಅಸ್ಪೃಶ್ಯತೆ ಆಚರಣೆಗೆ ಅವಕಾಶ ಇರುವುದಿಲ್ಲ. ಇದನ್ನು ಇಲಾಖೆ ಒಪ್ಪುವುದೂ ಇಲ್ಲ. ಒಂದು ವೇಳೆ ಇದೇ ರೀತಿಯ ಘಟನೆ ಮರುಕಳಿಸಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ತಾಲ್ಲೂಕಿನ ಮುದ್ದಾಬಳ್ಳಿಯಲ್ಲಿ ದಲಿತರು ಕ್ಷೌರ ಮಾಡುವಂತೆ ಕೇಳಿದ್ದರಿಂದ ಅಂಗಡಿ ಬಂದ್ ಮಾಡಿದ್ದ ಪ್ರಕರಣದ ಸಂಬಂಧ ಬುಧವಾರ ಸಭೆ ನಡೆದಿದ್ದು, ಇಂಥ ಘಟನೆ ಮರುಕಳಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. </p>.<p>‘ಪ್ರಜಾವಾಣಿ’ಯ ಬುಧವಾರದ ಸಂಚಿಕೆಯಲ್ಲಿ ‘ದಲಿತರು ಕ್ಷೌರ ಕೇಳಿದ್ದಕ್ಕೆ ಅಂಗಡಿಯೇ ಬಂದ್’ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.</p>.<p>ವರದಿ ಆಧರಿಸಿ ಸಭೆ ನಡೆಸಿರುವ ಅಧಿಕಾರಿಗಳು, ‘ದೇವಾಲಯ, ಹೋಟೆಲ್ ಹಾಗೂ ಕ್ಷೌರದ ಅಂಗಡಿಗಳಲ್ಲಿ ಎಲ್ಲರಿಗೂ ಮುಕ್ತ ಅವಕಾಶವಿರಬೇಕು. ದಲಿತರು ಎಂದು ನಿರಾಕರಿಸಿದರೆ ಕ್ರಮ ಜರುಗಿಸಲಾಗುವುದು’ ಎಂದು ಮುದ್ದಾಬಳ್ಳಿಯ ಕ್ಷೌರಿಕರಿಗೆ ಎಚ್ಚರಿಕೆ ನೀಡಿದರು.</p>.<p>ಬಳಿಕ ಗ್ರಾಮಸ್ಥರ ಸಮ್ಮುಖದಲ್ಲಿಯೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ದಲಿತ ವ್ಯಕ್ತಿಯೊಬ್ಬರಿಗೆ ಅದೇ ಗ್ರಾಮದ ಕ್ಷೌರಿಕರಿಂದ ಕ್ಷೌರ ಮಾಡಿಸಿದರು.</p>.<p>‘ಅಸ್ಪೃಶ್ಯತೆ ಆಚರಣೆಗೆ ಅವಕಾಶ ಇರುವುದಿಲ್ಲ. ಇದನ್ನು ಇಲಾಖೆ ಒಪ್ಪುವುದೂ ಇಲ್ಲ. ಒಂದು ವೇಳೆ ಇದೇ ರೀತಿಯ ಘಟನೆ ಮರುಕಳಿಸಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>