ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇಮ್ಯಾಗೇರಿ ಗ್ರಾಮದ 34 ವರ್ಷದ ಹನುಮಂತಪ್ಪ ಪೂಜಾರ ಎಂಬ ಯುವಕ ಭಾನುವಾರ 105 ಕೆ.ಜಿ. ತೂಕದ ಅಕ್ಕಿ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿದ್ದಾನೆ.
ಬೆಳಿಗ್ಗೆ 6 ಗಂಟೆಗೆ ಬೆಟ್ಟ ಏರುವುದನ್ನು ಆರಂಭಿಸಿ 50 ನಿಮಿಷಗಳಲ್ಲಿ 575 ಮೆಟ್ಟಿಲುಗಳನ್ನು ಹತ್ತಿ ಎಲ್ಲರ ಗಮನ ಸೆಳೆದರು.
ಕುರಿಗಾಹಿಯಾಗಿರುವ ಹನುಮಂತಪ್ಪ ಪೂಜಾರ ಆಂಜನೇಯನ ದರ್ಶನ ಪಡೆಯಬೇಕು ಎಂದು ಹಲವು ವರ್ಷಗಳಿಂದ ಕಾಯುತ್ತಿದ್ದರು. ಮೊದಲ ಬಾರಿಗೆ ಬೆಟ್ಟ ಹತ್ತಿದ ನೆನಪನ್ನು ಸ್ಮರಣೀಯವಾಗಿರಿಸಬೇಕು ಎನ್ನುವ ಕಾರಣಕ್ಕೆ ಅಕ್ಕಿಚೀಲ ಹೊತ್ತು ಹತ್ತಲು ನಿರ್ಧರಿಸಿದ್ದರು.
ಚೀಲ ಹೊತ್ತು ಬೆಟ್ಟ ಹತ್ತಬೇಕು ಎನ್ನುವ ಬಹಳ ದಿನಗಳ ಕನಸು ಈಗ ಈಡೇರಿದೆ. ನನ್ನ ಆಸೆಗೆ ಊರಿನ ಸ್ನೇಹಿತರು ನೆರವಾದರು. ಬಿಸಿಲು ಹೆಚ್ಚಾಗುವ ಮೊದಲೇ ಬೆಟ್ಟ ಹತ್ತಿ ಇಳಿಯಬೇಕು ಎಂದು ನಿರ್ಧರಿಸಿದ್ದೆ. ಅಂದುಕೊಂಡಂತೆ ಮಾಡಿದ್ದಕ್ಕೆ ಖುಷಿಯಾಗಿದೆ ಎಂದು ಹನುಮಂತಪ್ಪ ಪ್ರಜಾವಾಣಿ ಜೊತೆ ಅನಿಸಿಕೆ ಹಂಚಿಕೊಂಡರು.
ಕಳೆದ ವಾರ ಜಮಖಂಡಿ ತಾಲ್ಲೂಕಿನ ಹುನ್ನೂರು ಗ್ರಾಮದ ರಾಯಪ್ಪ ದಫೇದಾರ ಎಂಬುವರು 101 ಕೆ.ಜಿ. ತೂಕದ ಜೋಳದ ಚೀಲ ಹೊತ್ತು ಬೆಟ್ಟ ಹತ್ತಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.