ಪ್ರತಿಯೊಬ್ಬರೂ ಆಹಾರ ಪದ್ದತಿ, ಜೀವನ ಶೈಲಿ, ವಾರದಲ್ಲಿ ಕನಿಷ್ಠ 5 ದಿನ ವ್ಯಾಯಾಮ ಮಾಡುವುದರೊಂದಿಗೆ ಈ ರೋಗವನ್ನು ಹತೋಟಿಗೆ ತರಬಹುದು. ಸರ್ಕಾರ ಮಧುಮೇಹ ರೋಗವನ್ನು ಹತೋಟಿಗೆ ತರಲು ಎನ್.ಪಿ.ಸಿ.ಡಿ.ಸಿ.ಎಸ್ ಕಾರ್ಯಕ್ರಮದ ಅಡಿ ಜಿಲ್ಲಾಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎನ್.ಸಿ.ಡಿ ವೈದ್ಯರು ಹಾಗೂ ಶುಶ್ರೂಷಕಿಯರು ಮತ್ತು ಎನ್.ಸಿ.ಡಿ ಸಿಬ್ಬಂದಿ ಹಾಗೂ ಹಳ್ಳಿಗಳಲ್ಲಿ ಎಂ.ಎಲ್.ಎಚ್.ಪಿಯವರು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಮಧುಮೇಹ ತಪಾಸಣೆ ಮಾಡಿ ಚಿಕಿತ್ಸೆ ನೀಡುವ ಕಾರ್ಯಕ್ರಮ ಜಾರಿಗೆ ತಂದಿದೆ ಎಂದರು.