<p><strong>ಅಳವಂಡಿ:</strong> ‘ಕುಷ್ಠರೋಗವು ಸಂಪೂರ್ಣವಾಗಿ ಗುಣಪಡಿಸಬಹುದಾದ ಕಾಯಿಲೆಯಾಗಿದ್ದು, ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಕಾಶಪ್ಪ ಹಳ್ಳಿ ಹೇಳಿದರು.</p>.<p>ಸಮೀಪದ ನಿಲೋಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನಡೆದ ರಾಷ್ಟ್ರೀಯ ಕುಷ್ಠರೋಗ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಹದ ಮೇಲೆ ಯಾವುದೇ ತಿಳಿ ಬಣ್ಣದ ಮಚ್ಚೆಗಳು ಕಂಡುಬಂದಲ್ಲಿ ಕೂಡಲೇ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆದರೆ ಯಾವುದೇ ಅಂಗವೈಕಲ್ಯ ಉಂಟಾಗುವುದಿಲ್ಲ’ ಎಂದರು.</p>.<p>ಮುಖ್ಯಶಿಕ್ಷಕ ಗುರುರಾಜ ಪಾಟೀಲ ಮಾತನಾಡಿ, ‘ಕುಷ್ಠರೋಗಿಗಳನ್ನು ಕೀಳರಿಮೆಯಿಂದ ಕಾಣಬಾರದು. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ’ ಎಂದರು.</p>.<p>ಆರೋಗ್ಯ ಇಲಾಖೆಯ ಪ್ರತಿಭಾ, ರೇಷ್ಮಾ, ಶೋಭಾ, ರೇಣುಕಾ, ಲಕ್ಷ್ಮೀಬಾಯಿ, ಶಿಕ್ಷಕರಾದ ಸಂಗಪ್ಪ ರಾಟಿ, ಮುತ್ತು ಎಚ್. ಬನ್ನಿಕೊಪ್ಪ, ಮಂಜುನಾಥ ತಗಡಿನಮನಿ, ಚಂದ್ರಶೇಖರ, ಪೂರ್ಣಿಮಾ, ಲಕ್ಷ್ಮೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ:</strong> ‘ಕುಷ್ಠರೋಗವು ಸಂಪೂರ್ಣವಾಗಿ ಗುಣಪಡಿಸಬಹುದಾದ ಕಾಯಿಲೆಯಾಗಿದ್ದು, ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಕಾಶಪ್ಪ ಹಳ್ಳಿ ಹೇಳಿದರು.</p>.<p>ಸಮೀಪದ ನಿಲೋಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನಡೆದ ರಾಷ್ಟ್ರೀಯ ಕುಷ್ಠರೋಗ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಹದ ಮೇಲೆ ಯಾವುದೇ ತಿಳಿ ಬಣ್ಣದ ಮಚ್ಚೆಗಳು ಕಂಡುಬಂದಲ್ಲಿ ಕೂಡಲೇ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆದರೆ ಯಾವುದೇ ಅಂಗವೈಕಲ್ಯ ಉಂಟಾಗುವುದಿಲ್ಲ’ ಎಂದರು.</p>.<p>ಮುಖ್ಯಶಿಕ್ಷಕ ಗುರುರಾಜ ಪಾಟೀಲ ಮಾತನಾಡಿ, ‘ಕುಷ್ಠರೋಗಿಗಳನ್ನು ಕೀಳರಿಮೆಯಿಂದ ಕಾಣಬಾರದು. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ’ ಎಂದರು.</p>.<p>ಆರೋಗ್ಯ ಇಲಾಖೆಯ ಪ್ರತಿಭಾ, ರೇಷ್ಮಾ, ಶೋಭಾ, ರೇಣುಕಾ, ಲಕ್ಷ್ಮೀಬಾಯಿ, ಶಿಕ್ಷಕರಾದ ಸಂಗಪ್ಪ ರಾಟಿ, ಮುತ್ತು ಎಚ್. ಬನ್ನಿಕೊಪ್ಪ, ಮಂಜುನಾಥ ತಗಡಿನಮನಿ, ಚಂದ್ರಶೇಖರ, ಪೂರ್ಣಿಮಾ, ಲಕ್ಷ್ಮೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>