ಈ ವೇಳೆ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಅಗೌರವ ತೋರಲಾಗಿದೆ. ಅವರನ್ನು ವೇದಿಕೆ ಮೇಲೆ ಕರೆದಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಆದ್ದರಿಂದ ಈ ಸಂಘದ ಜಿಲ್ಲಾಧ್ಯಕ್ಷ ಸೋಮಪ್ಪ ಹರ್ತಿ, ಪ್ರೌಢಶಾಲಾ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಜಾಕೀರಹುಸೇನ್ ಕುಕನೂರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಶಂಕರಗೌಡ ಮಾಲಿಪಾಟೀಲ ಅವರು ಡಿಡಿಪಿಐಗೆ ಖಂಡನಾ ನಿರ್ಣಯದ ಮನವಿ ಸಲ್ಲಿಸಿದ್ದಾರೆ.