ಸಹಾಯಕ ಕೃಷಿ ನಿರ್ದೇಶಕ ಮಹಾದೇವಪ್ಪ ನಾಯಕ ಮಾತನಾಡಿ,‘ಸುಧಾರಿಸಿದ ಈ ತೊಗರಿ ತಳಿಯ ಬೀಜವನ್ನು ವೈಜ್ಞಾನಿಕ ರೀತಿಯಲ್ಲಿ, ತಜ್ಞರ ಸಲಹೆಯಂತೆ ಬಿತ್ತನೆ ಮಾಡಬೇಖು. ಸೂಕ್ತ ರೀತಿಯಲ್ಲಿ ಸಸ್ಯ ಸಂರಕ್ಷಣೆ ಕೈಗೊಂಡರೆ ಉತ್ತಮ ಇಳುವರಿ ಪಡೆಯಲು ಸಾಧ್ಯ. ಒಂದು ಬಾರಿ ಬಿತ್ತನೆ ಮಾಡಿದರೆ ಮುಂದಿನ ನಾಲ್ಕು ವರ್ಷಗಳವರೆಗೂ ರೈತರು ಅದೇ ಬೀಜಗಳನ್ನು ಪುನಃ ಬಿತ್ತನೆ ಮಾಡಲು ಸಾಧ್ಯವಾಗುತ್ತದೆ’ ಎಂದು ಅವರು ಹೇಳಿದರು.