<p><strong>ಕೊಪ್ಪಳ</strong>: ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳುಗಳು ಕಾಣಿಸಿಕೊಂಡಿವೆ ಎನ್ನುವ ವರದಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಮಂಗಳವಾರ ಶಾಲೆಗೆ ಭೇಟಿ ನೀಡಿ ಖುದ್ದು ಪರಿಶೀಲಿಸಿದರು.</p>.<p>ತಾಲ್ಲೂಕಿನ ಬಿಸರಳ್ಳಿಯ ನೃಪತುಂಗ ಅನುದಾನಿತ ಪ್ರೌಢಶಾಲೆಗೆ ಭೇಟಿ ನೀಡಿದ ಅಧಿಕಾರಿಗಳು ಬಿಸಿಊಟದ ಪರಿಶೀಲನೆ ನಡೆಸಿ, ಶಾಲೆಯ ಮಕ್ಕಳನ್ನು ಪ್ರತ್ಯೇಕವಾಗಿ ಕರೆದು ಅವರ ಸಮಸ್ಯೆಗಳನ್ನು ವಿಚಾರಿಸಿ ಮಾಹಿತಿ ಪಡೆದುಕೊಂಡರು. ಜಿಲ್ಲಾಧಿಕಾರಿ ತಾವೇ ತಟ್ಟೆ ತೊಳೆದುಕೊಂಡು ಸರತಿಯಲ್ಲಿ ನಿಂತುಕೊಂಡು ಮಕ್ಕಳ ಜೊತೆಗೆ ಬಿಸಿಯೂಟ ಮಾಡಿದರು. </p>.<p>ಅಡುಗೆ ಕೋಣೆಗೆ ಹೋಗಿ ಆಹಾರ ಸಾಮಗ್ರಿಗಳ ಪರಿಶೀಲನೆ ನಡೆಸಿ ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಆಹಾರ ನೀಡಬೇಕೆಂದು ಶಾಲೆಯ ಮುಖ್ಯ ಗುರುಗಳಿಗೆ ಸೂಚಿಸಿದರು. ಮಕ್ಕಳಿಂದಲೂ ಮಾಹಿತಿ ಪಡೆದಿದ್ದು, ಶಾಲೆಯ ಇನ್ನಷ್ಟು ಅಭಿವೃದ್ಧಿಯಾಗಬೇಕಾದ ಅಗತ್ಯವಿದೆ ಎನ್ನುವ ಹೇಳಿಕೆಗಳು ವ್ಯಕ್ತವಾದವು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಟಿ. ಕೃಷಮೂರ್ತಿ. ಲೋಕಾಯುಕ್ತ ಡಿವೈಎಸ್ಪಿ, ಶಾಲೆಯ ಮುಖ್ಯಶಿಕ್ಷಕ ಬಸವರಾಜ, ಪಿಡಿಒ ಶ್ರೀನಿವಾಸ ಪತ್ತಾರ, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಅನಿತಾ ಸೇರಿದಂತೆ ಅನೇಕರು ಇದ್ದರು.</p>.<p><strong>ಪರಿಶೀಲನೆ:</strong> ಇದಕ್ಕೂ ಮೊದಲು ಅಧಿಕಾರಿಗಳು ನಗರದ ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಸಗಟು ಮಾರಾಟ ಮಳಿಗೆಗೆ ಭೇಟಿ ನೀಡಿ ಅಲ್ಲಿ ಅಕ್ಕಿ, ಗೋಧಿ, ಬೆಳೆ ಪರಿಶೀಲಿಸಿದರು.</p>.<p>ಕ್ರಿಮಿಕೀಟಗಳು ಆಗದಂತೆ ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆ ವಹಿಸಬೇಕು. ಸ್ವಚ್ಛಗೊಳಿಸಿದ ಕುರಿತು ವರದಿಯ ದಾಖಲೆಗಳನ್ನು ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.</p>.<p><strong>ಅಡುಗೆಯವರ ಬದಲಾವಣೆ</strong></p><p><strong>ಕೊಪ್ಪಳ:</strong> ಅಡುಗೆಯಲ್ಲಿ ಹುಳುಗಳು ಕಂಡುಬಂದಿದ್ದರಿಂದ ಬಿಸರಳ್ಳಿಯ ನೃಪತುಂಗ ಅನುದಾನಿತ ಪ್ರೌಢಶಾಲೆಯ ಅಡುಗೆ ಮಾಡುವವರನ್ನು ಬದಲಾವಣೆ ಮಾಡಲಾಗಿದೆ. ತಾಲ್ಲೂಕಿನ ಹೊಸಲಿಂಗಾಪುರದ ಸರ್ಕಾರಿ ಶಾಲೆಯಲ್ಲಿಯೂ ಹುಳುಗಳು ಬಂದಿದ್ದವು ಎನ್ನುವ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹರಿದಾಡಿತ್ತು. ಆದರೆ ವಿಡಿಯೊದಲ್ಲಿ ಇರುವುದು ನಿಜವಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳುಗಳು ಕಾಣಿಸಿಕೊಂಡಿವೆ ಎನ್ನುವ ವರದಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಮಂಗಳವಾರ ಶಾಲೆಗೆ ಭೇಟಿ ನೀಡಿ ಖುದ್ದು ಪರಿಶೀಲಿಸಿದರು.</p>.<p>ತಾಲ್ಲೂಕಿನ ಬಿಸರಳ್ಳಿಯ ನೃಪತುಂಗ ಅನುದಾನಿತ ಪ್ರೌಢಶಾಲೆಗೆ ಭೇಟಿ ನೀಡಿದ ಅಧಿಕಾರಿಗಳು ಬಿಸಿಊಟದ ಪರಿಶೀಲನೆ ನಡೆಸಿ, ಶಾಲೆಯ ಮಕ್ಕಳನ್ನು ಪ್ರತ್ಯೇಕವಾಗಿ ಕರೆದು ಅವರ ಸಮಸ್ಯೆಗಳನ್ನು ವಿಚಾರಿಸಿ ಮಾಹಿತಿ ಪಡೆದುಕೊಂಡರು. ಜಿಲ್ಲಾಧಿಕಾರಿ ತಾವೇ ತಟ್ಟೆ ತೊಳೆದುಕೊಂಡು ಸರತಿಯಲ್ಲಿ ನಿಂತುಕೊಂಡು ಮಕ್ಕಳ ಜೊತೆಗೆ ಬಿಸಿಯೂಟ ಮಾಡಿದರು. </p>.<p>ಅಡುಗೆ ಕೋಣೆಗೆ ಹೋಗಿ ಆಹಾರ ಸಾಮಗ್ರಿಗಳ ಪರಿಶೀಲನೆ ನಡೆಸಿ ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಆಹಾರ ನೀಡಬೇಕೆಂದು ಶಾಲೆಯ ಮುಖ್ಯ ಗುರುಗಳಿಗೆ ಸೂಚಿಸಿದರು. ಮಕ್ಕಳಿಂದಲೂ ಮಾಹಿತಿ ಪಡೆದಿದ್ದು, ಶಾಲೆಯ ಇನ್ನಷ್ಟು ಅಭಿವೃದ್ಧಿಯಾಗಬೇಕಾದ ಅಗತ್ಯವಿದೆ ಎನ್ನುವ ಹೇಳಿಕೆಗಳು ವ್ಯಕ್ತವಾದವು.</p>.<p>ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಟಿ. ಕೃಷಮೂರ್ತಿ. ಲೋಕಾಯುಕ್ತ ಡಿವೈಎಸ್ಪಿ, ಶಾಲೆಯ ಮುಖ್ಯಶಿಕ್ಷಕ ಬಸವರಾಜ, ಪಿಡಿಒ ಶ್ರೀನಿವಾಸ ಪತ್ತಾರ, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಅನಿತಾ ಸೇರಿದಂತೆ ಅನೇಕರು ಇದ್ದರು.</p>.<p><strong>ಪರಿಶೀಲನೆ:</strong> ಇದಕ್ಕೂ ಮೊದಲು ಅಧಿಕಾರಿಗಳು ನಗರದ ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಸಗಟು ಮಾರಾಟ ಮಳಿಗೆಗೆ ಭೇಟಿ ನೀಡಿ ಅಲ್ಲಿ ಅಕ್ಕಿ, ಗೋಧಿ, ಬೆಳೆ ಪರಿಶೀಲಿಸಿದರು.</p>.<p>ಕ್ರಿಮಿಕೀಟಗಳು ಆಗದಂತೆ ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆ ವಹಿಸಬೇಕು. ಸ್ವಚ್ಛಗೊಳಿಸಿದ ಕುರಿತು ವರದಿಯ ದಾಖಲೆಗಳನ್ನು ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.</p>.<p><strong>ಅಡುಗೆಯವರ ಬದಲಾವಣೆ</strong></p><p><strong>ಕೊಪ್ಪಳ:</strong> ಅಡುಗೆಯಲ್ಲಿ ಹುಳುಗಳು ಕಂಡುಬಂದಿದ್ದರಿಂದ ಬಿಸರಳ್ಳಿಯ ನೃಪತುಂಗ ಅನುದಾನಿತ ಪ್ರೌಢಶಾಲೆಯ ಅಡುಗೆ ಮಾಡುವವರನ್ನು ಬದಲಾವಣೆ ಮಾಡಲಾಗಿದೆ. ತಾಲ್ಲೂಕಿನ ಹೊಸಲಿಂಗಾಪುರದ ಸರ್ಕಾರಿ ಶಾಲೆಯಲ್ಲಿಯೂ ಹುಳುಗಳು ಬಂದಿದ್ದವು ಎನ್ನುವ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹರಿದಾಡಿತ್ತು. ಆದರೆ ವಿಡಿಯೊದಲ್ಲಿ ಇರುವುದು ನಿಜವಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>